ತುಮಕೂರು/ಪಾವಗಡ:ಪಾವಗಡದಿಂದ ರೈಲ್ವೆ ಕಾಮಗಾರಿಗೆ ಕಬ್ಬಿಣ ತುಂಬಿಸಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್ ಗಂಗಸಾಗರದ ಬಳಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ನಲ್ಲಿದ್ದ ಕಾರ್ಮಿಕ ಕಬ್ಬಿಣದ ಕೆಳಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕಬ್ಬಿಣ ತುಂಬಿಸಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ: ಸರಳುಗಳ ಕೆಳಗೆ ಸಿಕ್ಕಿ ಕಾರ್ಮಿಕ ಸಾವು - Pavagada latest news
ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಪರಿಣಾಮ ಟ್ರಾಕ್ಟರ್ನಲ್ಲಿದ್ದ ಕಾರ್ಮಿಕ ಸ್ಥಳದಲ್ಲೇ ಮೃಪಟ್ಟಿದ್ದಾನೆ.

Tractor Pulty
ಕಬ್ಬಿಣ ತುಂಬಿ ಸಾಗುತ್ತಿದ್ದ ಟ್ಯಾಕ್ಟರ್ ಪಲ್ಟಿ ಹೊಡೆದು ಕಾರ್ಮಿಕ ಸಾವು
ಬಾಲಮ್ಮನಹಳ್ಳಿ ಗ್ರಾಮದ ವೆಂಕಟೇಶ್ (32) ಮೃತ ಕಾರ್ಮಿಕ. ಇನ್ನು ಇಬ್ಬರು ಕಾರ್ಮಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳಿಸಲಾಗಿದೆ.
ಘಟನಾ ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪ್ರಕ್ರರಣ ದಾಖಲಿಸಿಕೊಂಡಿದ್ದಾರೆ.