ಕರ್ನಾಟಕ

karnataka

By

Published : Jun 4, 2020, 8:05 PM IST

ETV Bharat / state

ತುಮಕೂರಲ್ಲಿ ಕೊರೊನಾ ಸೋಂಕಿನಿಂದ ನಾಲ್ವರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್​

ಮಹಾಮಾರಿ ಕೊರೊನಾ ಸೋಂಕಿನಿಂದ ನಾಲ್ವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಈವರೆಗೆ ಒಟ್ಟು 32 ಮಂದಿಯಲ್ಲಿ ಕೊರೊನಾ ಸೋಂಕು ಕಂಡು ಬಂದಿದ್ದು, ಇಬ್ಬರು ಮೃತಪಟ್ಟಿದ್ದಾರೆ. 13 ವರ್ಷದ ಬಾಲಕ ಸೇರಿ 15 ಮಂದಿ ಗುಣಮುಖರಾಗಿದ್ದಾರೆ.

4 are recovered from corona
4 are recovered from corona

ತುಮಕೂರು: ಜಿಲ್ಲೆಯ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 19 ಮಂದಿಯ ಪೈಕಿ ನಾಲ್ವರು ಗುಣಮುಖರಾಗಿದ್ದು, ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.

ಪಿ-1561, ಪಿ-1623, ಪಿ-2135, ಪಿ-2343 ಸೋಂಕಿನಿಂದ ಗುಣಮುಖರಾಗಿದ್ದು, ಇಂದು ಅವರನ್ನು ಬಿಡುಗಡೆ ಮಾಡಲಾಯಿತು. ಇನ್ನುಳಿದ 15 ಮಂದಿ ಸೋಂಕಿತರಿಗೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಇದುವರೆಗೂ ಜಿಲ್ಲೆಯಲ್ಲಿ 10,649 ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, 9799 ಮಂದಿಯ ವರದಿ ನೆಗೆಟಿವ್ ಬಂದಿದೆ. 2146 ಮಂದಿಯನ್ನು ಕ್ವಾರಂಟೈನ್​ನಲ್ಲಿ ಇಡಲಾಗಿದೆ. 55 ಮಂದಿಯನ್ನು ಶಂಕಿತರೆಂದು ಗುರುತಿಸಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ 621 ಮಂದಿಯ ವರದಿ ಬರಬೇಕಿದೆ.

197 ಜನರ ವರದಿ ತಿರಸ್ಕರಿಸಿ ಪುನಃ ಪರೀಕ್ಷೆಗೆ ಕಳುಹಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 32 ಮಂದಿಯಲ್ಲಿ ಕೊರೊನಾ ಸೋಂಕು ಕಂಡು ಬಂದಿದ್ದು, ಇಬ್ಬರು ಮೃತಪಟ್ಟಿದ್ದಾರೆ. 13 ವರ್ಷದ ಬಾಲಕ ಸೇರಿ 15 ಮಂದಿ ಗುಣಮುಖರಾಗಿದ್ದಾರೆ.

ABOUT THE AUTHOR

...view details