ಕರ್ನಾಟಕ

karnataka

ETV Bharat / state

ರಸ್ತೆ ವಿಭಜಕ ದಾಟಿ ಟಿಟಿ ವಾಹನಕ್ಕೆ ಕಾರು ಡಿಕ್ಕಿ: ಇಬ್ಬರು ದುರ್ಮರಣ, ಹಲವರಿಗೆ ಗಾಯ

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬೇಗೂರು ಬೈಪಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.

By

Published : May 10, 2022, 9:50 AM IST

Tumkuru accident, two died
ರಸ್ತೆ ವಿಭಜಕ ದಾಟಿ ಟಿಟಿ ವಾಹನಕ್ಕೆ ಕಾರು ಡಿಕ್ಕಿ: ಇಬ್ಬರು ದುರ್ಮರಣ, ಹಲವರಿಗೆ ಗಾಯ

ತುಮಕೂರು: ರಸ್ತೆ ವಿಭಜಕವನ್ನು ದಾಟಿ ಕಾರು ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬೇಗೂರು ಬೈಪಾಸ್ ಬಳಿ ಇಂದು ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ರಘು (27) ಸಂತೋಷ್​ (21) ಎಂದು ಗುರುತಿಸಲಾಗಿದೆ. ಈ ಇಬ್ಬರೂ ಕಾರಿನಲ್ಲಿದ್ದು, ಟಿಟಿ ವಾಹನದಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಚಿಕ್ಕಮಗಳೂರಿನಿಂದ ಬೆಂಗಳೂರು ಕಡೆಗೆ ಕಾರು ಸಂಚರಿಸುತ್ತಿತ್ತು. ಟಿಟಿ ವಾಹನ ಬೆಂಗಳೂರಿನಿಂದ ಧರ್ಮಸ್ಥಳ ಕಡೆ ಹೊರಟಿತ್ತು ಎಂದು ತಿಳಿದುಬಂದಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ನಿವೇಶನ ಒತ್ತುವರಿ ವಿಚಾರಕ್ಕೆ ಗಲಾಟೆ: ಮಹಿಳೆಯರ ಮೇಲೆ ಹಲ್ಲೆ ಆರೋಪ

ABOUT THE AUTHOR

...view details