ಕರ್ನಾಟಕ

karnataka

By

Published : Nov 14, 2021, 5:46 PM IST

ETV Bharat / state

ಕೋಡಿ ಬಿದ್ದ ನೀರಿಗೆ ತಡೆಗೋಡೆ ; ಜನವಸತಿ ಪ್ರದೇಶಕ್ಕೆ ನುಗ್ಗಿದ ಕೆರೆ ನೀರು

ಭಾರಿ ಮಳೆ (heavy rain)ಹಿನ್ನೆಲೆ ತುಮಕೂರಿನಲ್ಲಿ ಕೆರೆಗಳು ಕೋಡಿ ಬಿದ್ದು, ನೀರು ಜನವಸತಿ ಪ್ರದೇಶ, ರೈತರ ಹುಲ್ಲಿನ ಬಣವೆಗೆ ನುಗ್ಗುತ್ತಿದೆ..

Water flows in residential area due to heavy rain
ಜನವಸತಿ ಪ್ರದೇಶಕ್ಕೆ ನುಗ್ಗಿದ ಕೆರೆ ನೀರು

ತುಮಕೂರು :ಜಿಲ್ಲೆಯಲ್ಲಿ ಒಂದೆಡೆ ಭರ್ಜರಿ ಮಳೆಯಾಗಿದೆ(heavy rain). ಇನ್ನೊಂದೆಡೆ ಹೇಮಾವತಿ ನದಿ ನೀರು ಕೂಡ ಹರಿದು ಬರುತ್ತಿರುವುದರಿಂದ ಕೆರೆಕಟ್ಟೆಗಳಲ್ಲಿ ಕೋಡಿ ಬಿದ್ದು ಅಪಾರ ಪ್ರಮಾಣದ ನೀರು ಸಂಗ್ರಹವಾಗುತ್ತಿದೆ.

ಜನವಸತಿ ಪ್ರದೇಶಕ್ಕೆ ನುಗ್ಗಿದ ಕೆರೆ ನೀರು..

ಆದರೆ, ಕೆಲವೆಡೆ ಕೋಡಿಬಿದ್ದ ನೀರು, ಹೆಚ್ಚುವರಿ ನೀರು ಹರಿದು ಹೋಗದಂತೆ ಕೆಲವರು ಮರಳಿನ ಮೂಟೆಗಳನ್ನು ಇಟ್ಟು ಕೆರೆಯಲ್ಲಿ ನೀರು ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸುತ್ತಿದ್ದಾರೆ. ಇದರಿಂದಾಗಿ ಹೆಚ್ಚುವರಿ ನೀರು ಕೆರೆಯಲ್ಲಿ ಸಂಗ್ರಹವಾಗಿ ಸಮೀಪದ ಗ್ರಾಮದೊಳಗೆ ನುಗ್ಗುತ್ತಿದೆ.

ಇದೇ ರೀತಿ ಚಿಕ್ಕನಾಯಕನಹಳ್ಳಿ(Chikkanayakanahalli)ತಾಲೂಕಿನ ಹುಳಿಯಾರು ಸಮೀಪದ ತಿಮ್ಮಲಾಪುರ ಕೆರೆಯಲ್ಲಿ ಎರಡು ಕೋಡಿಗಳಲ್ಲಿ ನೀರು ಹರಿಯುವುದನ್ನು ತಡೆದಿದ್ದಾರೆ.

ಈ ಹಿನ್ನೆಲೆ ಕೆರೆಯ ನೀರು ತಿಮ್ಮಲಾಪುರ ಗ್ರಾಮಕ್ಕೆ ನುಗ್ಗುತ್ತಿದೆ. ಇದರಿಂದಾಗಿ ರೈತರ ಹುಲ್ಲಿನ ಬಣವೆ(wrick) ಹಾಗೂ ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿ ತೀವ್ರ ತೊಂದರೆಯಾಗುತ್ತಿದೆ.

ಈ ಕುರಿತಂತೆ ನೀರಾವರಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ತಕ್ಷಣ ಜಿಲ್ಲಾಡಳಿತ ಇತ್ತ ಗಮನಹರಿಸಿ ಗ್ರಾಮದ ಜನರ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಲಖನ್ ಬಿಜೆಪಿಯ 2ನೇ ಅಭ್ಯರ್ಥಿಯಾಗಲಿ; ಸಹೋದರನ ಪರ ಬಾಲಚಂದ್ರ ಜಾರಕಿಹೊಳಿ ಬ್ಯಾಟಿಂಗ್

ABOUT THE AUTHOR

...view details