ತುಮಕೂರು :ಜಿಲ್ಲೆಯಲ್ಲಿ ಪ್ರಸ್ತುತ ಯುವಕರಿಗೆ ಮದುವೆಯಾಗಲು ಹೆಣ್ಣುಗಳು ಸಿಗುತ್ತಿಲ್ಲ ಎಂಬ ವಿಷಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯ ಪ್ರತಿ ಗ್ರಾಮದಲ್ಲಿ ಮದುವೆಯಾಗಲು ಹೆಣ್ಣು ಸಿಗದೇ ವಯಸ್ಸು ಮೀರಿರುವ 30 ರಿಂದ 40 ಮಂದಿ ಯುವಕರು ಕಂಡು ಬರುತ್ತಾರೆ. ಕೃಷಿಕರಾಗಿರುವ ಕಾರಣ ನಮಗೆ ಹೆಣ್ಣು ಕೊಡ್ತಿಲ್ಲ ಎಂದು ಅವಿವಾಹಿತರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಗ್ರಾಮೀಣ ಭಾಗದಲ್ಲಿ ಸಣ್ಣ ಹಿಡುವಳಿದಾರರಿಗೆ ಮದುವೆ ಭಾಗ್ಯವೇ ಇಲ್ಲದಂತಾಗಿದೆ. ಗಾರ್ಮೆಂಟ್ಸ್ಗಳಲ್ಲಿ ಕೆಲಸ ಮಾಡುವ ಯುವಕರಿಗೆ ಹೆಣ್ಣು ಕೊಡ್ತಾರೆ. ರೈತರಾಗಿರುವವರಿಗೆ ಹೆಣ್ಣುಗಳು ಸಿಗುತ್ತಿಲ್ಲ. ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಿರುವ ನಮಗೆ ಹೆಣ್ಣು ಕೊಡಲು ಹೆಣ್ಣು ಹೆತ್ತವರು ಮುಂದಾಗುತ್ತಿಲ್ಲ.
ಹೆಣ್ಣು ಸಿಗದೇ ಪರದಾಡುತ್ತಿರುವ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಯುವಕರು ಉತ್ತರ ಕರ್ನಾಟಕದ ದೂರದ ಊರುಗಳ ಹೆಣ್ಣನ್ನು ಮದುವೆ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರ ವಧು ಸಿಗದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿಬೇಕಿದೆ. ಅಂತಹವರಿಗೆ ಆರ್ಥಿಕ ಸಹಾಯ ಮಾಡಬೇಕಿದೆ ಅಂತಾರೆ ಸ್ಥಳೀಯರು.