ಉಡುಪಿ:ಜಿಲ್ಲೆಯ ಗಂಗೊಳ್ಳಿ ಸಮೀಪದ ಮುಳ್ಳಿಕಟ್ಟೆ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಬೈಕ್ ಹಾಗೂ ಟೆಂಪೋ ಟ್ರಾವೆಲರ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ.
ಮೃತರನ್ನು ಬೈಕ್ ಸವಾರ ಗಂಗೊಳ್ಳಿ ಜಾಮಿಯಾ ಮೊಹಲ್ಲಾ ನಿವಾಸಿ ಶಾದಾಬ್ (43) ಹಾಗೂ ಸಹಸವಾರ ಬೈಂದೂರು ಮೂಲದ ಸದ್ಯ ಗಂಗೊಳ್ಳಿ ಬಾಡಿಗೆ ಮನೆ ನಿವಾಸಿ ಅಬ್ದುರ್ರಹೀಂ (51) ಎಂದು ಗುರುತಿಸಲಾಗಿದೆ.