ಕರ್ನಾಟಕ

karnataka

ETV Bharat / state

ಗ್ರಾಮ ಪಂಚಾಯಿತಿ ಚುನಾವಣೆ: ಕೃಷ್ಣ ಮಠದಲ್ಲಿ ಗೋ ಪೂಜೆ ಸಲ್ಲಿಸಿದ ಬಿಜೆಪಿ ನಾಯಕರು - cow worship at sri krishna temple at udupi

ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಬಿಜೆಪಿ ಪ್ರಚಾರ ಸಭೆಗಳನ್ನು ಆರಂಭಿಸಿದೆ. 31ಜಿಲ್ಲೆಗಳಲ್ಲಿ 62 ಸಮಾವೇಶಗಳನ್ನು ನಡೆಸಲು ಪಕ್ಷ ನಿರ್ಧರಿಸಿದೆ.

bjp-leaders-make-cow-worship-at-krishna-math
ಕೃಷ್ಣ ಮಠದಲ್ಲಿ ಗೋ ಪೂಜೆ ಸಲ್ಲಿಸಿದ ಬಿಜೆಪಿ ನಾಯಕರು

By

Published : Nov 27, 2020, 4:09 PM IST

ಉಡುಪಿ: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಚಾರ ಸಭೆಗಳನ್ನು ಆರಂಭಿಸಿದೆ. ಕೃಷ್ಣ ಮಠದಲ್ಲಿ ಗೋ ಪೂಜೆ ನಡೆಸುವ ಮೂಲಕ ಪಕ್ಷದ ನಾಯಕರು ಗ್ರಾಮ ಸ್ವರಾಜ್ ಸಮಾವೇಶಕ್ಕೆ ಚಾಲನೆ ನೀಡಿದ್ದಾರೆ.

ಕೃಷ್ಣ ಮಠದಲ್ಲಿ ಗೋ ಪೂಜೆ ಸಲ್ಲಿಸಿದ ಬಿಜೆಪಿ ನಾಯಕರು

ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್, ಡಿಸಿಎಂ ಅಶ್ವತ್ಥ ನಾರಾಯಣ , ಸಂಸದರಾದ ಶೋಭಾ ಕರಂದ್ಲಾಜೆ, ಮುನಿಸ್ವಾಮಿ ಶ್ರೀಕೃಷ್ಣನ ದರ್ಶನ ಪಡೆದರು.

ಇದನ್ನೂ ಓದಿ:ಒಬಿಸಿಗೆ ವೀರಶೈವ- ಲಿಂಗಾಯತರ ಸೇರ್ಪಡೆ ವಿಚಾರ ಚರ್ಚೆ ಮುಂದೂಡಿದ ಸಂಪುಟ ಸಭೆ

ಪರ್ಯಾಯ ಅದಮಾರು ಮಠಾಧೀಶ ಈಶಪ್ರಿಯ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಗೌರವ ಸಲ್ಲಿಕೆ ಮಾಡಿದರು. ನಂತರ ಕೆಲ ಕಾಲ ಮಾತುಕತೆ ನಡೆಸಿ ಶ್ರೀಗಳೂ ಆಶೀರ್ವಾದವನ್ನು ಪಡೆದರು. ಮಠದ ಗೋಶಾಲೆಗೆ ತೆರಳಿದ ಬಿಜೆಪಿ ನಾಯಕರು ಗೋವುಗಳಿಗೆ ಪೂಜೆ ಸಲ್ಲಿಸಿದರು‌. ಹಾರ , ಶಾಲು ಸಲ್ಲಿಸಿದರು. ಗೋವಿಗೆ ಬಾಳೆಹಣ್ಣು ತಿನ್ನಿಸಿದ ನಳಿನ್ ಕುಮಾರ್ ಕಟೀಲ್ ಕೈಯನ್ನು ಹಸು ಕಚ್ಚಿದ ಘಟನೆ ನಡೆಯಿತು.31 ಜಿಲ್ಲೆಗಳಲ್ಲಿ 62 ಸಮಾವೇಶಗಳನ್ನು ನಡೆಸಲು ಪಕ್ಷ ನಿರ್ಧರಿಸಿದೆ.

For All Latest Updates

ABOUT THE AUTHOR

...view details