ಕರ್ನಾಟಕ

karnataka

ETV Bharat / state

ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19ಗೆ ಎರಡನೇ ಬಲಿ

ಹೋಂ ಕ್ವಾರಂಟೈನ್​ನಲ್ಲಿದ್ದ ವ್ಯಕ್ತಿ ದಿಢೀರ್ ಮೃತಪಟ್ಟಿದ್ದು, ಗಂಟಲ ದ್ರವ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ಇರೋದು ಗೊತ್ತಾಗಿದೆ.

By

Published : Jun 20, 2020, 7:40 AM IST

udupi
udupi

ಉಡುಪಿ:ಕೋವಿಡ್ 19ಗೆ ಜಿಲ್ಲೆಯಲ್ಲಿ ಎರಡನೇ ಬಲಿಯಾಗಿದೆ. ಮುಂಬೈನಿಂದ ಬಂದ ವ್ಯಕ್ತಿ ದಿಢೀರ್ ಮೃತಪಟ್ಟ ಘಟನೆ ನಡೆದಿದೆ.

ಗುರುವಾರ ಮಧ್ಯಾಹ್ನ ಮಹಾರಾಷ್ಟ್ರದಿಂದ ಕುಂದಾಪುರಕ್ಕೆ ಬಂದಿದ್ದ ಇವರು ಹೋಂ ಕ್ವಾರಂಟೈನ್​ಗೆ ಒಳಗಾಗಿದ್ದರು. ಉಡುಪಿಗೆ ಬಂದಾಗ ಸಂಪೂರ್ಣ ತಪಾಸಣೆ ಮಾಡಿದ್ದರೂ ಕೊರೋನಾದ ಯಾವುದೇ ಲಕ್ಷಣ ಕಂಡು ಬಂದಿರಲಿಲ್ಲ.

ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ

ಮೃತ ವ್ಯಕ್ತಿ ತೆಕ್ಜಟ್ಟೆ ನಿವಾಸಿಯಾಗಿದ್ದು, ಇವರೊಂದಿಗೆ ಇನ್ನೂ ನಾಲ್ಕು ಮಂದಿ ಮಹಾರಾಷ್ಟ್ರದಿಂದ ಬಂದಿದ್ದರು.

ಪೋಸ್ಟ್ ಮಾರ್ಟಂ ಬಳಿಕ ಸಾವಿಗೆ ಕಾರಣ ಏನೆಂದು ತಿಳಿಯಬೇಕಾಗಿದೆ. ಗಂಟಲ ದ್ರವ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ಇರೋದು ಗೊತ್ತಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ABOUT THE AUTHOR

...view details