ಉಡುಪಿ:ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ಗೆ ವಂಚಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವೈದ್ಯೆ ಸಹಿತ ಇಬ್ಬರನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.
ಉಪ್ಪೂರು ಸಾಲ್ಮರ ನಿವಾಸಿ ಡಾ. ರೆನಿಟ್ ಸೋನಿಯಾ ಡಿಸೋಜ ಹಾಗೂ ಸಾಲಿಗ್ರಾಮ ಚಿತ್ರಪಾಡಿ ನಿವಾಸಿ ವಿಜಯ ಕೊಠಾರಿ (43) ಬಂಧಿತ ಆರೋಪಿಗಳು. ಡಾ. ರೆನೆಟ್ ಸೋನಿಯಾ ಡಿಸೋಜ ತಾನು ಮಣಿಪಾಲದ ಮಾಹೆಯಲ್ಲಿ ವೈದ್ಯೆ ಹಾಗೂ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದು, ಮಾಸಿಕ ವೇತನ 2.66 ಲಕ್ಷ ರೂ. ಎಂದು ಹೇಳಿ ಕಾರು ಖರೀದಿಗೆ ಸಾಲ ಕೊಡುವಂತೆ ಕಾಪು ಮೂಡುಬೆಟ್ಟಿನ ಬ್ಯಾಂಕ್ ಆಫ್ ಬರೋಡಾ ಶಾಖೆಯ ಮ್ಯಾನೇಜರ್ ಅಲ್ವಿನಾ ಡಿಸೋಜ ಅವರಿಗೆ ಮನವಿ ಮಾಡಿದ್ದರು.