ಕರ್ನಾಟಕ

karnataka

ETV Bharat / state

ಉಡುಪಿಯಲ್ಲಿ ದೇವೇಗೌಡರ ಟೆಂಪಲ್ ರನ್​... 'ಎಚ್​ಎಂಟಿ' ಕ್ಷೇತ್ರಗಳ ಗೆಲುವಿಗೆ ಪೂಜೆ - undefined

ಕುಂದಾಪುರ ಸಮೀಪದ ಕೋಟದ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ದಂಪತಿ, ಮೊಮ್ಮೊಗನ ಮದುವೆ ಆಮಂತ್ರಣ ಪತ್ರಿಕೆಗೆ ಪೂಜೆ ಸಲ್ಲಿಸಿದರು. ಮೇ 16ರ ವರೆಗೆ ಕಾಪುವಿನಲ್ಲಿ ತಂಗಲಿರುವ ದೇವೇಗೌಡ ದಂಪತಿ, ಉಡುಪಿಯ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸ ಮಾಡಲಿದ್ದಾರೆ.

ಕೋಟ ಅಮೃತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ದೇವೇಗೌಡ ದಂಪತಿ

By

Published : May 11, 2019, 3:06 AM IST

Updated : May 11, 2019, 3:25 AM IST

ಉಡುಪಿ: ಉಡುಪಿಯ ಮುಳೂರಿನಲ್ಲಿ ಪ್ರಕೃತಿ ಚಿಕಿತ್ಸೆಗೆಂದು ಆಗಮಿಸಿದ ಮಾಜಿ ಪ್ರಧಾನಿ/ಜೆಡಿಎಸ್​ ವರಿಷ್ಠ ದೇವೇಗೌಡರು ಅವರು ತಮ್ಮ ಪತ್ನಿ ಚಿನ್ನಮ್ಮ ಜೊತೆ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ .

ಕೋಟ ಅಮೃತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ದೇವೇಗೌಡ ದಂಪತಿ

ಕುಂದಾಪುರ ಸಮೀಪದ ಕೋಟದ ಅಮೃತೇಶ್ವರಿ ದೇವಸ್ಥಾನಕ್ಕೆ ಮಧ್ಯಾಹ್ನ ಭೇಟಿ ನೀಡಿದ ದಂಪತಿ, ಮೊಮ್ಮಗನ ಮದುವೆ ಆಮಂತ್ರಣ ಪತ್ರಿಕೆಗೆ ಪೂಜೆ ಸಲ್ಲಿಸಿದರು. ಮೇ 16ರ ವರೆಗೆ ಕಾಪುವಿನಲ್ಲಿ ತಂಗಲಿರುವ ದೇವೇಗೌಡ ದಂಪತಿ, ಉಡುಪಿಯ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ತಮ್ಮ ಹಾಗೂ ಮೊಮ್ಮಕ್ಕಳ ಗೆಲುವಿಗಾಗಿ (ಎಚ್​ಎಂಟಿ: ಹಾಸನ, ಮಂಡ್ಯ ಹಾಗೂ ತುಮಕೂರು ಕ್ಷೇತ್ರಗಳು) ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅಮೃತೇಶ್ವರಿ ದೇವಸ್ಥಾನದ ಅರ್ಚಕರು, ಮೊಮ್ಮಗನ ಮದುವೆ ಆಮಂತ್ರಣ ಪತ್ರಿಕೆಯನ್ನು ದೇವಿಯ ಮುಂದಿಟ್ಟು ಪೂಜೆ ಸಲ್ಲಿಸಿದರು. ಬಳಿಕ ನಿಮಗೂ ಹಾಗೂ ನಿಮ್ಮ ಕುಟುಂಬ ಸದಸ್ಯರಿಗೂ ಶುಭವಾಗಲಿ ಎಂದು ಹಾರೈಸಿದರು. ಈ ವೇಳೆ ಕುಟುಂಬದ ಕೆಲವು ಸದಸ್ಯರು ಸಹ ಭಾಗವಹಿಸಿದ್ದರು.

Last Updated : May 11, 2019, 3:25 AM IST

For All Latest Updates

TAGGED:

ABOUT THE AUTHOR

...view details