ಉಡುಪಿ: ಕಳೆದ ಒಂದು ತಿಂಗಳಿಂದ ಜಿಲ್ಲೆಯಲ್ಲಿ ಸಲೂನ್ಗಳು ಬಂದ್ ಆಗಿರುವುದರಿಂದ ಹೇರ್ ಕಟಿಂಗ್, ಶೇವಿಂಗ್ ಮಾಡದೆ ಜನಕ್ಕೆ ಕಿರಿಕಿರಿಯಾಗುತ್ತಿದೆ. ಮನೆಯಲ್ಲಿ ಲಾಕ್ ಆಗಿರೋರು ತಮ್ಮ ಹೇರ್ ಕಟಿಂಗ್ ತಾವೇ ಮಾಡಿಕೊಳ್ತಾ ಇದ್ದಾರೆ. ಆದರೆ ಹೊರ ಜಿಲ್ಲೆಯಿಂದ ಬಂದು ನಿರಾಶ್ರಿತರ ಕೇಂದ್ರದಲ್ಲಿ ಇರುವ ಜನರು ಹೇರ್ ಕಟಿಂಗ್, ಶೇವಿಂಗ್ ಇಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ.
ಜನಸಾಮಾನ್ಯರ ಸಂಕಷ್ಟ ಅರಿತುಕೊಂಡ ಜಿಲ್ಲೆಯ ಸಮಾಜ ಸೇವಕ ನಿತ್ಯಾನಂದ ಒಳಕಾಡು ಶೇವಿಂಗ್ ಕಿಟ್ಗಳನ್ನು ವಿತರಿಸಿದ್ದಾರೆ. ಉಡುಪಿಯ ಇಂದಿರಾ ಕ್ಯಾಂಟೀನ್ ಬಳಿ ಪ್ರತಿನಿತ್ಯ ನೂರಾರು ಮಂದಿ ನಿರ್ಗತಿಕರು, ಹೊರ ಜಿಲ್ಲೆ-ಹೊರ ರಾಜ್ಯದ ಕಾರ್ಮಿಕರು ಊಟಕ್ಕೆ ಬರ್ತಾರೆ. ಈ ಸಂದರ್ಭದಲ್ಲಿ ಇಂದಿರಾ ಕ್ಯಾಂಟೀನ್ ಆವರಣಕ್ಕೆ ಬಂದ ನಿತ್ಯಾನಂದ ಒಳಕಾಡು ಸೋಪು, ಬ್ಲೇಡ್, ಯೂಸ್ ಅಂಡ್ ಥ್ರೋ ಶೇವಿಂಗ್ ಕಿಟ್ ಮತ್ತು ಬ್ರಶ್ಗಳನ್ನು ನೀಡಿದರು.