ಉಡುಪಿ/ಮಂಗಳೂರು:ಕುಂದಾಪುರದ ಕೆದೂರು ಸಮೀಪ ರೈಲ್ವೆ ಹಳಿ ಮೇಲೆ ಮೂರ್ನಾಲ್ಕು ಅಡಿವರೆಗೆ ನೀರು ಹರಿಯುತ್ತಿದ್ದರೆ, ಇತ್ತ ಸುಬ್ರಹ್ಮಣ್ಯ ಮತ್ತು ಸಕಲೇಶಪುರ ಮಧ್ಯೆ ಸಿರಿಬಾಗಿಲುವಿನಲ್ಲಿ ರೈಲು ಹಳಿಯಲ್ಲಿ ಮಣ್ಣು ಕುಸಿದ ಪರಿಣಾಮ ರೈಲು ಸಂಚಾರಕ್ಕೆ ತೊಡಕಾಗಿದೆ.
ಕುಂದಾಪುರದ ಕೆದೂರು ಸಮೀಪ ರೈಲ್ವೆ ಹಳಿ ಮೇಲೆ ಮೂರ್ನಾಲ್ಕು ಅಡಿ ನೀರು ಹರಿಯುತ್ತಿತ್ತು. ಅದೇ ವೇಳೆಯಲ್ಲಿ ಮುಂಬೈನಿಂದ ಮಂಗಳೂರಿಗೆ ರೈಲು ಸಾಗಬೇಕಾಗಿತ್ತು. ಕೆದೂರು ಬಳಿ ಹಳಿಯಲ್ಲಿ ಎಚ್ಚರಿಕೆ ವಹಿಸುವಂತೆ ಕುಂದಾಪುರ ರೈಲ್ವೆ ವಲಯದಿಂದ ಸೂಚನೆ ನೀಡಲಾಗಿತ್ತು. ಸಕಾಲದಲ್ಲಿ ರೈಲು ಹಳಿಯಲ್ಲಿ ನೀರು ಕಂಡ ಚಾಲಕ ತಕ್ಷಣ ರೈಲು ನಿಲ್ಲಿಸಿ ಆ ಮಳೆಯಲ್ಲೇ ಕಿಲೋಮೀಟರ್ ದೂರ ನಡೆದು ಹಳಿ ವೀಕ್ಷಣೆ ಮಾಡಿದ್ದಾರೆ. ಆಗ ನೀರು ತುಂಬಿರುವುದನ್ನು ಗಮನಿಸಿದ್ದಾನೆ. ತಕ್ಷಣವೇ ಕಂಟ್ರೋಲ್ ರೂಂ ಗೆ ಮಾಹಿತಿ ನೀಡಿದ್ದ. ಅಲ್ಲದೇ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ, ಭಯವಾಗರದೆಂಬ ನಿಟ್ಟಿನಲ್ಲಿ ಸುಮಾರು 20 ನಿಮಿಷಗಳಷ್ಟು ಕಾಲ ರೈಲನ್ನು ನಿಲ್ಲಿಸಿ ಮಳೆ ನೀರು ಹತೋಟಿಗೆ ಬಂದ ಬಳಿಕ ರೈಲನ್ನು ಮಂಗಳೂರಿನತ್ತ ಚಲಾಯಿಸಿದ್ದಾನೆ.