ಉಡುಪಿ:ಕುಡಿದ ಮತ್ತಿನಲ್ಲಿ ಯುವತಿ ಬೀದಿ ರಂಪಾಟ ಮಾಡಿದ ಘಟನೆ ಉಡುಪಿ ಮಣಿಪಾಲ ಡಿಸಿ ಆಫೀಸ್ ರಸ್ತೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಮದ್ಯ ಸೇವನೆ ಮಾಡಿದ್ದ ಯುವಕ, ಯುವತಿ ಪಿಜ್ಜಾ ಶಾಫ್ಗೆ ಬಂದು ಸಾರ್ವಜನಿಕರೊಂದಿಗೆ ಗಲಾಟೆ ಮಾಡಿಕೊಂಡಿದ್ದಾರೆ.
ಈ ವೇಳೆ ಅಲ್ಲಿನ ಸಿಬ್ಬಂದಿಯು ಪಿಜ್ಜಾ ಶಾಪ್ನಿಂದ ಇಬ್ಬರನ್ನು ಹೊರಗೆ ಕಳುಹಿಸಿದ್ದಾರೆ. ಬಳಿಕ ಯುವತಿಯು ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾಗಿದ್ದಾಳೆ ಎನ್ನಲಾಗಿದೆ. ಇದೇ ವೇಳೆ, ಸಾರ್ವಜನಿಕರು ಯುವತಿಯ ತಲೆ ಮೇಲೆ ತಣ್ಣೀರು ಹಾಕಿ ನಶೆ ಇಳಿಸಲು ಮುಂದಾಗಿದ್ದಾರೆ ಎನ್ನಲಾಗಿದ್ದು, ಆಗ ಅವರ ಯುವತಿ ಹಲ್ಲೆಗೆ ಮುಂದಾಗಿದ್ದಾಳಂತೆ.