ಕರ್ನಾಟಕ

karnataka

By

Published : Oct 23, 2022, 11:02 PM IST

ETV Bharat / state

ಕೊರಗಜ್ಜನ ಪವಾಡದಿಂದ ಬದುಕುಳಿದ ಕಂದಮ್ಮ.. ಅಜ್ಜನಿಗೆ ಚಿರಋಣಿ ಎಂದ ಪೋಷಕರು

ಬದುಕುವುದೇ ಇಲ್ಲ ಎಂದು ವೈದ್ಯರು ಹೇಳಿದ್ದ ಮಗುವೊಂದು ಕೊರಗಜ್ಜನ ಕೃಪೆಯಿಂದ ಆಸ್ಪತ್ರೆಯಿಂದ ಆರೋಗ್ಯವಾಗಿ ಹೊರ ಬಂದಿರುವ ಘಟನೆ ನಡೆದಿದ್ದು, ಪೋಷಕರು ಮಗು ಕೊರಗಜ್ಜನ ಪ್ರಸಾದವೆಂದೇ ಭಾವಿಸುತ್ತೇವೆ ಎಂದಿದ್ದಾರೆ.

Kandamma survived by the miracle of Koragajja
ಕೊರಗಜ್ಜನ ಪವಾಡದಿಂದ ಬದುಕುಳಿದ ಕಂದಮ್ಮ

ಉಡುಪಿ:ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ‌ ಮಹಿಮೆ, ಪವಾಡಗಳನ್ನು ನಾವು ಕೇಳಿರುತ್ತೇವೆ. ಅದರಂತೆ, ಜೀವ ಹೋಗುವ ಸ್ಥಿತಿಯಲ್ಲಿದ್ದ ಮಗು ಕೊರಗಜ್ಜನ ದಯೆಯಿಂದ ಬದುಕಿದ ಘಟನೆ ಉಡುಪಿಯಲ್ಲಿ ನಡೆದಿದೆ. ಸಾಗರ ಮೂಲದ ಪುಟ್ಟ ಹೆಣ್ಣು ಮಗುವಿಗೆ ವಿಪರೀತ ಜ್ವರ ಕಾಣಿಸಿಕೊಂಡಿತ್ತು. ಎರಡು ದಿನ ಕಳೆದರೂ ಜ್ವರ ಕಡಿಮೆಯಾಗದೇ ಮಗು ಅಳು ನಿಲ್ಲಿಸುತ್ತಿರಲ್ಲಿಲ್ಲ. ಹೀಗಾಗಿ‌ ಕುಂದಾಪುರದ ಅಸ್ಪತ್ರೆಗೆ ದಾಖಲಿಸಲಾಗಿತ್ತು.

ಆಸ್ಪತ್ರೆಯಲ್ಲಿ ಮಗುವಿಗೆ ಪಿಡ್ಸ್ ಇರುವುದಾಗಿಯೂ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಕೆಎಂಸಿಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿದ್ದ ಮಗುವಿನ ಅರೋಗ್ಯ ಚಿಂತಾಜನಕವಾಗಿತ್ತು. ಅಷ್ಟೇ ಅಲ್ಲ ಪದೇ ಪದೆ ಮಗುವಿನ ಹೃದಯ ಸ್ತಬ್ಧವಾಗುತ್ತಿರುವುದರ ಬಗ್ಗೆ ವೈದರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು.

ವೈದರ ಪ್ರಯತ್ನ ಮಾಡುವುದಾಗಿಯೂ ಭರವಸೆ ನೀಡಿದರೂ ಮಗುವಿನ ಪ್ರಾಣ ಉಳಿಯುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು‌. ಮಗುವಿನ ಪರಿಸ್ಥಿತಿ ಕಂಡ ಕುಟುಂಬಸ್ಥರು ಕಂಗಾಲಾಗಿ ಹೋಗಿದ್ದರು‌. ಅಷ್ಟರಲ್ಲಿ ಆಸ್ಪತ್ರೆ ಬಳಿಯಿದ್ದ ಓರ್ವ ವ್ಯಕ್ತಿ ಕೊರಗಜ್ಜ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸುವಂತೆ ಹೇಳಿದ ಹಿನ್ನೆಲೆಯಲ್ಲಿ ಮಗುವಿನ ಹೆತ್ತವರು ಇಂದ್ರಾಳಿ, ಎಂಜಿಎಂ ಹಾಸ್ಟೆಲ್ ಬಳಿಯಿರುವ ಕೊರಗಜ್ಜನ ಕ್ಷೇತ್ರಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಪಡೆದು ತೆರಳಿದ್ದರು.

ಗಂಭೀರ ಸ್ಥಿತಿಯಲ್ಲಿದ್ದ ಪುಟ್ಟ ಕಂದಮ್ಮನ ಅರೋಗ್ಯ ದಿಢೀರಾಗಿ ಚೇತರಿಕೆ ಕಾಣಿಸಿಕೊಳ್ಳಲು ಪ್ರಾರಂಭಿಸಿತ್ತು. ವೈದರು ಕೂಡ ತಮ್ಮ ಕೈಲಾದ ಪ್ರಯತ್ನಗಳನ್ನು ಮಾಡುವ ಮೂಲಕ ಹತ್ತೊಂಬತ್ತು ದಿನಗಳಲ್ಲಿ ಮಗು ಆರೋಗ್ಯವಾಗಿ ಹೆತ್ತಮ್ಮಳ ಕೈಯಲ್ಲಿ ಮತ್ತೆ ಬಂದು ಸೇರಿತು. ಹೃದಯ ಬಡಿತವೇ ನಿಂತು ಹೋಯಿತು ಎನ್ನುತ್ತಿದ್ದಾಗ ಮಗು ಮತ್ತೆ ಕಿಲ ಕಿಲ‌ ನಗುತ್ತಿರುವುದನ್ನು ಕಂಡ ಕುಟುಂಬಸ್ಥರ ಸಂತೋಷ ಮುಗಿಲು ಮುಟ್ಟಿತ್ತು.

ಇದಕ್ಕೆಲ್ಲ ಕಾರಣ ಕೊರಗಜ್ಜ ಎನ್ನುವುದು ಕುಟುಂಬಸ್ಥರ ನಂಬಿಕೆ ಹೀಗಾಗಿ ಆಸ್ಪತ್ರೆಯಿಂದ ನೇರವಾಗಿ ಇಂದ್ರಾಳಿ ಬಳಿಯ ಕೊರಗಜ್ಜನ ಕ್ಷೇತ್ರಕ್ಕೆ ಬಂದು ಮಗುವನ್ನು ಕೊರಗಜ್ಜ ಸ್ವಾಮಿಯ ಮುಂದಿಟ್ಟು ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಪಡೆದುಕೊಂಡರು. ಬದುಕಿರುವವರೆಗೂ ಈ ಮಗು ಕೊರಗಜ್ಜನ ಪ್ರಸಾದವೆಂದೇ ನಂಬಿ ಬದುಕುತ್ತೇವೆ ಎಂದು ಹೇಳುತ್ತ ಅನಂದ ಭಾಷ್ಟಗಳೊಂದಿಗೆ ತಮ್ಮೂರಿಗೆ ತೆರಳಿದ್ದಾರೆ.

ಇದನ್ನೂ ಓದಿ:ಕುತ್ತಾರು ಕೊರಗಜ್ಜ, ಎಳ್ವೆರ್ ಸಿರಿಕುಲು ಆದಿಸ್ಥಳಗಳಿಗೆ ಸಾಲುಮರದ ತಿಮ್ಮಕ್ಕ ಭೇಟಿ

ABOUT THE AUTHOR

...view details