ಕರ್ನಾಟಕ

karnataka

ಉಡುಪಿಯಲ್ಲಿಂದು ಸರಳವಾಗಿ ಕೃಷ್ಣ ಜನ್ಮಾಷ್ಟಮಿ ಆಚರಣೆ

By

Published : Sep 10, 2020, 7:43 AM IST

Updated : Sep 10, 2020, 7:51 AM IST

ಇಂದು ಹಾಗೂ ನಾಳೆ ಸರಳವಾಗಿ‌ ಅಷ್ಟಮಿ‌ ಆಚರಿಸಲು ಪರ್ಯಾಯ ಶ್ರೀಗಳು ನಿರ್ಧಾರ ಮಾಡಿದ್ದಾರೆ. ಇಂದು ರಾತ್ರಿ ಪರ್ಯಾಯ ಯತಿ ಈಶಪ್ರಿಯ ತೀರ್ಥ ಸ್ವಾಮೀಜಿಗಳಿಂದ ಅರ್ಘ್ಯ ಪ್ರದಾನ ನಡೆಯಲಿದ್ದು, ನಾಳೆ ರಥ ಬೀದಿಯಲ್ಲಿ ವಿಟ್ಲಪಿಂಡಿ‌ ಆಚರಣೆ ನಡೆಯಲಿದೆ.

Krishna janmastami at Udupi
ಉಡುಪಿಯಲ್ಲಿಂದು ಸಾಂಪ್ರದಾಯಿಕ ಕೃಷ್ಣಜನ್ಮಾಷ್ಟಮಿ

ಉಡುಪಿ: ಕೃಷ್ಣ ನಗರಿಯಲ್ಲಿ ಇಂದು ಸಾಂಪ್ರದಾಯಿಕ ಕೃಷ್ಣ ಜನ್ಮಾಷ್ಟಮಿ ನಡೆಯಲಿದೆ. ಹೌದು, ಇಂದು ಹಾಗೂ ನಾಳೆ ಸರಳವಾಗಿ‌ ಅಷ್ಟಮಿ‌ ಆಚರಿಸಲು ಪರ್ಯಾಯ ಶ್ರೀಗಳು ನಿರ್ಧಾರ ಮಾಡಿದ್ದಾರೆ.

ಇಂದು ರಾತ್ರಿ ಪರ್ಯಾಯ ಯತಿ ಈಶಪ್ರಿಯ ತೀರ್ಥ ಸ್ವಾಮೀಜಿಗಳಿಂದ ಅರ್ಘ್ಯ ಪ್ರದಾನ ನಡೆಯಲಿದ್ದು, ನಾಳೆ ರಥ ಬೀದಿಯಲ್ಲಿ ವಿಟ್ಲಪಿಂಡಿ‌ ಆಚರಣೆ ನಡೆಯಲಿದೆ. ಮಠದ ಸಿಬ್ಬಂದಿ ಹಾಗೂ ಗೊಲ್ಲರಿಂದ ಮಡಿಕೆ ಒಡೆದು ವಿಟ್ಲ ಪಿಂಡಿ ಆಚರಣೆ ನಡೆಯಲಿದೆ. ರಥ ಬೀದಿ ಸುತ್ತಲೂ ಮಡಿಕೆ ಒಡೆದು ರಥೋತ್ಸವ ಕೂಡ ನಡೆಯಲಿದೆ.

ಅದಮಾರು ವಿಶ್ವಪ್ರಿಯ ತೀರ್ಥ ಶ್ರೀ ಪಾದರು

ಈ ಬಾರಿ ಅಷ್ಟಮಿಯಲ್ಲಿ ಯಾವುದೇ ವೇಷಗಳಿಗೆ ಅವಕಾಶವಿಲ್ಲ. ಸಾರ್ವಜನಿಕರು ರಥ ಬೀದಿಗೆ ಆಗಮಿಸಲು ಜಿಲ್ಲಾಡಳಿತದಿಂದ ನಿರ್ಬಂಧ ಹೇರಲಾಗಿದೆ. ಮಠದವರೇ ಮಡಿಕೆ‌ ಒಡೆದು ಸಾಂಪ್ರದಾಯಿಕವಾಗಿ ವಿಟ್ಲಪಿಂಡಿ‌ ಆಚರಿಸುಲಿದ್ದು, ಅದ್ಧೂರಿಯಾಗಿ ಅಷ್ಟಮಿ ಆಚರಿಸದಿರಲು ನಿರ್ಧರಿಸಲಾಗಿದೆ ಎಂದು ಅದಮಾರು ವಿಶ್ವಪ್ರಿಯ ತೀರ್ಥ ಶ್ರೀ ಪಾದರು ತಿಳಿಸಿದರು.

Last Updated : Sep 10, 2020, 7:51 AM IST

ABOUT THE AUTHOR

...view details