ಕರ್ನಾಟಕ

karnataka

ETV Bharat / state

ಉಡುಪಿ ಜಿಲ್ಲೆಗೆ ಲಾಕ್​ಡೌನ್​ ಅಗತ್ಯವಿಲ್ಲ: ಶಾಸಕ ರಘುಪತಿ ಭಟ್​!

ಸಧ್ಯ ಉಡುಪಿ ಜಿಲ್ಲೆಯನ್ನು ಲಾಕ್​ಡೌನ್​ ಮಾಡುವ ಅಗತ್ಯವಿಲ್ಲ. ಹೊರ ಜಿಲ್ಲೆಗಳಿಂದ ಬರುತ್ತಿರುವ ಸೋಂಕಿತರೇ ಬಹಳ ದೊಡ್ಡ ಸವಾಲಾಗಿದ್ದು, ಜಿಲ್ಲೆಯ ಗಡಿ ಭಾಗವನ್ನು ಸೀಲ್​ಡೌನ್​ ಮಾಡಲು ಸಲಹೆ ನೀಡಿದ್ದೇನೆಂದು ಶಾಸಕ ರಘುಪತಿ ಭಟ್​ ಹೇಳಿದರು.

By

Published : Jul 13, 2020, 9:39 PM IST

mla-raghupati-bhat-statement-on-lock-down
ಶಾಸಕ ರಘುಪತಿ ಭಟ್

ಉಡುಪಿ :ಜಿಲ್ಲೆಯಲ್ಲಿ ಸದ್ಯಕ್ಕೆ ಲಾಕ್​​ಡೌನ್​ ಅಗತ್ಯವಿಲ್ಲ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಜನ ಜೀವನ ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದು, ಮತ್ತೆ ಲಾಕ್​ಡೌನ್​ ಮಾಡಿದರೆ ಆರ್ಥಿಕತೆಯ ಮೇಲೆ ಭಾರಿ ಹೊಡೆತ ಬೀಳಲಿದೆ. ಜಿಲ್ಲೆಯ ಒಳಗಡೆ ಪರಿಸ್ಥಿತಿಯನ್ನು ನಿಯಂತ್ರಿಸುವುದು ಕಷ್ಟವಲ್ಲ. ಹೊರ ಜಿಲ್ಲೆಯಿಂದ ಬರುತ್ತಿರುವ ಸೋಂಕಿತರೇ ಬಹಳ ದೊಡ್ಡ ಸವಾಲಾಗಿದ್ದಾರೆ.

ಉಡುಪಿ ಜಿಲ್ಲೆಗೆ ಲಾಕ್​ಡೌನ್​ ಅಗತ್ಯವಿಲ್ಲ

ಜಿಲ್ಲೆಯ ಗಡಿ ಭಾಗಗಳನ್ನು ಸೀಲ್​ಡೌನ್ ಮಾಡಲು ಸಲಹೆ ನೀಡಿದ್ದೇನೆ. ಹೊರ ಜಿಲ್ಲೆಯಿಂದ ಬರುತ್ತಿರುವವರನ್ನು ಹೋಮ್ ಕ್ವಾರಂಟೈನ್ ಮಾಡಬೇಕು. ಆಗ ಸೋಂಕು ಹರಡುವುದು ನಿಯಂತ್ರಣಕ್ಕೆ ಬರುತ್ತದೆ. ನಾನು ಕೂಡ ಸಲಹೆಯನ್ನು ಜಿಲ್ಲಾಧಿಕಾರಿಗಳಿಗೆ ನೀಡಿದ್ದಿನೆಂದು ಶಾಸಕರು ಹೇಳಿದರು.

ABOUT THE AUTHOR

...view details