ಉಡುಪಿ:ಕೊರೊನಾ ಶಂಕಿತರು ಬಂದರೆ ಆಸ್ಪತ್ರೆಗೆ ದಾಖಲಿಸಿಕೊಳ್ಳಿ, ಎಲ್ಲಾ ರೀತಿಯ ಸೌಲಭ್ಯ ಒದಗಿಸಿ ಎಂದು ಜಿಲ್ಲಾಧಿಕಾರಿ ಜಗದೀಶ್ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲೂ ಎರಡು ಬೆಡ್ನ ಐಸೊಲೇಷನ್ ವಾರ್ಡ್ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ 10, ತಾಲೂಕು ಆಸ್ಪತ್ರೆಯಲ್ಲಿ 5, ಕೆಎಂಸಿಯಲ್ಲಿ 10 ಬೆಡ್ಗಳ ವಾರ್ಡ್ ಮಾಡಲಾಗಿದೆ. ಅಗತ್ಯ ಬಿದ್ದರೆ ನೂತನ ಗ್ರಂಥಾಲಯ ಕಟ್ಟಡದಲ್ಲಿ 100 ಬೆಡ್ಗಳ ವ್ಯವಸ್ಥೆ ಮಾಡಲಾಗುವುದು. ಪ್ರಥಮ ಹಂತದಲ್ಲಿ ಮೂವತ್ತು ಬೆಡ್ಗಳನ್ನು ಒಳಗೊಂಡ ಐಸೊಲೇಷನ್ ವಾರ್ಡ್ ಮಾಡಲಾಗುವುದು ಎಂದು ಜಗದೀಶ್ ಹೇಳಿದ್ದಾರೆ.
ಉಡುಪಿಗೆ ಈವರೆಗೆ ವಿದೇಶದಿಂದ 230 ಮಂದಿ ಬಂದಿದ್ದು ಎಲ್ಲರನ್ನೂ ಸಂಪರ್ಕಿಸಿ ಮನೆಯಲ್ಲೇ ಉಳಿಯುವಂತೆ ಸೂಚಿಸಲಾಗಿದೆ. ಹೋಂ ಕ್ವಾರಂಟೈನ್ ಉಲ್ಲಂಘನೆ ಮಾಡಿದರೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಹೇಳಿದ್ದಾರೆ.