ಕರ್ನಾಟಕ

karnataka

ETV Bharat / state

ಪದ್ಮಶ್ರೀ ಪುರಸ್ಕೃತ ಬನ್ನಂಜೆ ಗೋವಿಂದಾಚಾರ್ಯ ಅಸ್ತಂಗತ - Bannanje Govindacharya news

ಪದ್ಮಶ್ರೀ ಪುರಸ್ಕೃತರಾಗಿದ್ದ ಬನ್ನಂಜೆ ಗೋವಿಂದಾಚಾರ್ಯರು ಆಧ್ಯಾತ್ಮಿಕ ಪ್ರವಚನಗಳ ಮೂಲಕ ಪ್ರಸಿದ್ಧರಾಗಿದ್ದರು. ಗೋವಿಂದಾಚಾರ್ಯ ಅವರು ಪ್ರವಚನಕಾರ, ಮಧ್ವ ಸಿದ್ಧಾಂತದ ಪ್ರತಿಪಾದಕರಾಗಿ, ಪತ್ರಕರ್ತರಾಗಿ ಅನೇಕ ಅಂಕಣಗಳನ್ನು ಬರೆದಿದ್ದರು. ಈಟಿವಿ ಕನ್ನಡ ವಾಹಿನಿಯಲ್ಲೂ ಹಲವು ವರ್ಷಗಳ ಕಾಲ ಪ್ರವಚನಕಾರರಾಗಿ ಕೆಲಸ ಮಾಡಿದ್ದರು..

ಬನ್ನಂಜೆ ಗೋವಿಂದಾಚಾರ್ಯರು
ಬನ್ನಂಜೆ ಗೋವಿಂದಾಚಾರ್ಯರು

By

Published : Dec 13, 2020, 1:38 PM IST

ಉಡುಪಿ :ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ (85) ಅವರು ಇಂದು ಜಿಲ್ಲೆಯ ಅಂಬಲಪಾಡಿಯ ನಿವಾಸದಲ್ಲಿ ನಿಧನರಾಗಿದ್ದಾರೆ.

ಬನ್ನಂಜೆ ಗೋವಿಂದಾಚಾರ್ಯರು

ಪದ್ಮಶ್ರೀ ಪುರಸ್ಕೃತರಾಗಿದ್ದ ಬನ್ನಂಜೆ ಗೋವಿಂದಾಚಾರ್ಯರು ಆಧ್ಯಾತ್ಮಿಕ ಪ್ರವಚನಗಳ ಮೂಲಕ ಪ್ರಸಿದ್ಧರಾಗಿದ್ದರು. ಗೋವಿಂದಾಚಾರ್ಯ ಅವರು ಪ್ರವಚನಕಾರ, ಮಧ್ವ ಸಿದ್ಧಾಂತದ ಪ್ರತಿಪಾದಕರಾಗಿ, ಪತ್ರಕರ್ತರಾಗಿ ಅನೇಕ ಅಂಕಣಗಳನ್ನು ಬರೆದಿದ್ದರು. ಈಟಿವಿ ಕನ್ನಡ ವಾಹಿನಿಯಲ್ಲೂ ಹಲವು ವರ್ಷಗಳ ಕಾಲ ಪ್ರವಚನಕಾರರಾಗಿ ಕೆಲಸ ಮಾಡಿದ್ದರು.

ಇದನ್ನು ಓದಿ:ಬೆಂಗಳೂರಿನಲ್ಲಿ ಮುಂದುವರೆಯಲಿದೆ ಮಂಜು ಕವಿದ ವಾತಾವರಣ..

ನಟ ಡಾ.ವಿಷ್ಣುವರ್ಧನ್ ಆಧ್ಯಾತ್ಮಿಕ ಗುರು ಆಗಿದ್ದ ಬನ್ನಂಜೆ ಹಲವಾರು ಕೃತಿಗಳನ್ನು ಸಂಸ್ಕೃತದಿಂದ ಕನ್ನಡಕ್ಕೆ ತರ್ಜುಮೆಗೈದ ಪಂಡಿತರಾಗಿದ್ದರು. ಮೂರು ಚಲನಚಿತ್ರಗಳಿಗೆ ಸಂಭಾಷಣೆ ಬರೆದಿದ್ದ ಬನ್ನಂಜೆ ಗೋವಿಂದಾಚಾರ್ಯರು ಮಧ್ವಾಚಾರ್ಯ, ಶಂಕರಾಚಾರ್ಯ, ರಾಮಾನುಜಾಚಾರ್ಯ ಚಿತ್ರಗಳ ಸಂಭಾಷಣೆ ಕೂಡ ಬರೆದಿದ್ದರು. ಹಲವು ಚಾರಿತ್ರಿಕ ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದ ಇವರು, ಉಪನಿಷತ್ತಿನ ಅಧ್ಯಾಯಗಳಿಗೆ ಟಿಪ್ಪಣಿ ಬರೆದಿದ್ದರು.

ಬನ್ನಂಜೆ ಗೋವಿಂದಾಚಾರ್ಯರು

ABOUT THE AUTHOR

...view details