ಉಡುಪಿ:ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಉಡುಪಿಯಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಲಾಯಿತು. ಉಡುಪಿ ಜಿಲ್ಲಾ ನಾಗರಿಕ ವೇದಿಕೆ ಈ ಪ್ರತಿಭಟನೆಯ ನೇತೃತ್ವ ವಹಿಸಿತ್ತು.
ಜೋಡುಕಟ್ಟೆಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಉಡುಪಿಯ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಅಜ್ಜರಕಾಡು ಹುತಾತ್ಮ ವೇದಿಕೆ ಬಳಿ ಪ್ರತಿಭಟನಾ ಮೆರವಣಿಗೆ ಸಮಾಪನಗೊಂಡಿತು. ತಳ್ಳುಗಾಡಿಯಲ್ಲಿ ಮೋಟಾರ್ ಬೈಕ್, ಗ್ಯಾಸ್ ಸಿಲಿಂಡರ್ ತೆಗೆದುಕೊಂಡು ಹೋಗುವ ಮೂಲಕ ಪ್ರತಿಭಟನಾಕಾರರು ವಿಭಿನ್ನವಾಗಿ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಪೆಟ್ರೋಲ್ ಹಾಕಿ ವಾಹನ ಚಲಾಯಿಸಲು ಸಾಧ್ಯವಿಲ್ಲ, ತಳ್ಳುಗಾಡಿಯ ಮೇಲೆ ದ್ವಿಚಕ್ರ ವಾಹನ ಇಟ್ಟು ತಳ್ಳುತ್ತಾ ಹೋಗುವ ಪರಿಸ್ಥಿತಿ ಇದೆ ಎನ್ನುವುದನ್ನು ಮಾರ್ಮಿಕವಾಗಿ ಹೇಳಿದರು.