ಭಟ್ಕಳ(ಉತ್ತರ ಕನ್ನಡ):ತಾಲ್ಲೂಕಿನ ಹೇರೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಪ್ಲಾಸ್ಟಿಕ್ ನಿಷೇಧ ಬಗ್ಗೆ ಜಾಗೃತಿ ಅಭಿಯಾನ ನಡೆಸಿದ್ರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಬೀದಿನಾಟಕ, ಘೋಷಣೆಗಳನ್ನು ಕೂಗುವ ಮೂಲಕ ಪ್ಲಾಸ್ಟಿಕ್ನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸಿದ್ರು.
ಸಹ್ಯಾದ್ರಿ ಇಕೋ ಕ್ಲಬ್ ಹಾಗೂ ಎಸ್ಡಿಎಂಸಿ ನೇತೃತ್ವದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧದ ಕುರಿತು ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಗ್ರಾಮದ ಮನೆಮನೆಗೆ ತೆರಳಿ ಬಟ್ಟೆಚೀಲ ವಿತರಿಸಿದ್ರು.