ಕರ್ನಾಟಕ

karnataka

ETV Bharat / state

ಬನ್ನಂಜೆ ಗೋವಿಂದಾಚಾರ್ಯ ನಿಧನಕ್ಕೆ ಪ್ರಧಾನಿ ಸಂತಾಪ - ಪದ್ಮಶ್ರೀ ಬನ್ನಂಜೆ ಗೋವಿಂದಾಚಾರ್ಯ ನಿಧನ

ಬನ್ನಂಜೆ ಗೋವಿಂದಾಚಾರ್ಯ ನಿಧನ ಅತೀವ ನೋವು ತಂದಿದೆ. ಅವರ ಕುಟುಂಬಕ್ಕೆ ಭಗವಂತ ನೋವು ಸಹಿಸುವ ಶಕ್ತಿ ನೀಡಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

PM Modi Condolence for Bannanje Govindacharya death
ಬನ್ನಂಜೆ ಗೋವಿಂದಾಚಾರ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

By

Published : Dec 13, 2020, 7:33 PM IST

ಉಡುಪಿ: ಪದ್ಮಶ್ರೀ ಡಾ. ಬನ್ನಂಜೆ ಗೋವಿಂದಾಚಾರ್ಯ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಗೋವಿಂದಾಚಾರ್ಯ ಸಾಹಿತ್ಯಕ್ಕೆ ನೀಡಿದ ಕೊಡುಗೆ ಅಪಾರ. ಸಂಸ್ಕೃತ ಮತ್ತು ಕನ್ನಡಕ್ಕೆ ಅವರ ಕೊಡುಗೆ ಪ್ರಶಂಸನೀಯ. ಮುಂದಿನ ಪೀಳಿಗೆಗೂ ಅವರ ಕಾರ್ಯಗಳು ಪ್ರಭಾವಕಾರಿ. ಬನ್ನಂಜೆಯವರ ನಿಧನ ಅತೀವ ನೋವು ತಂದಿದೆ. ಅವರ ಕುಟುಂಬಕ್ಕೆ ಭಗವಂತ ನೋವು ಸಹಿಸುವ ಶಕ್ತಿ ನೀಡಲಿ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಓದಿ : ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರ ಬದುಕು-ಬರಹ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ (85) ಅವರು ಉಡುಪಿಯ ಅಂಬಲಪಾಡಿಯ ನಿವಾಸದಲ್ಲಿ ನಿಧನರಾಗಿದ್ದಾರೆ.

ABOUT THE AUTHOR

...view details