ಉಡುಪಿ:ತಾಯಿ-ಮಗನ ಮೇಲೆ ಕೋಟ ಠಾಣೆಯ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಕಾಲ್ನಡಿಗೆ ಜಾಥಾ ನಡೆಸಿದರು.
ಬೈಕ್ನಲ್ಲಿ ತಾಯಿಯನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಪ್ರಶಾಂತ್ ಎಂಬಾತನ ಮೇಲೆ ಕೋಟ ಠಾಣೆಯ ಪೊಲೀಸರು ವಾಹನ ತಪಾಸಣೆಯ ನೆಪದಲ್ಲಿ ದೌರ್ಜನ್ಯ ನಡೆಸಿದ್ದಾರೆ. ಅಲ್ಲದೆ ಮಗನ ರಕ್ಷಣೆಗೆ ನಿಂತ ತಾಯಿಯ ಮೇಲೂ ಪೊಲೀಸರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಸಾರ್ವಜನಿಕರು ಸಾಲಿಗ್ರಾಮದಿಂದ ಕೋಟ ಹೈಸ್ಕೂಲ್ವರೆಗೆ ಕಾಲ್ನಡಿಗೆ ಜಾಥಾ ನಡೆಸಿದರು.