ಉಡುಪಿ: ಭಾರತ್ ಬಂದ್ ಕರೆಯುವ ಅವಶ್ಯಕತೆ ಇರಲಿಲ್ಲ. 50- 60 ವರ್ಷದ ಹಿಂದಿನ ಬೇಡಿಕೆಗಳಿಗೆ ಅರ್ಥ ಇಲ್ಲ, ಬಂದ್ ಕರೆ ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆ ಆಗುತ್ತೆ ಅಂತ ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಉಡುಪಿಯಲ್ಲಿ ಮಿನಿ ವಿಧಾನ ಸೌಧ ಉದ್ಘಾಟಿಸಿ ಬಂದ್ ವಿಚಾರವಾಗಿ ಖಾರವಾಗಿಯೇ ಪ್ರತಿಕ್ರಿಯಿಸಿದ ಅವರು, ಕಮ್ಯುನಿಸ್ಟ್ ಪ್ರೇರಿತ ಬಂದ್ ಹೇರಿಕೆ ಸರಿಯಲ್ಲ, ಬಂದ್ ನಿಂದ ಯಾವುದೇ ಉದ್ದೇಶ ಈಡೇರಲ್ಲ ಕರ್ನಾಟಕ ಜನ ಬಂದನ್ನು ತಿರಸ್ಕಾರ ಮಾಡಿದ್ದಾರೆ. ನಾನಿದನ್ನು ಸ್ವಾಗತ ಮಾಡುತ್ತೇನೆ ಅಂದ್ರು.
ಇನ್ನು ಈ ವೇಳೆ ನೆರೆ ಪರಿಹಾರದ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಗೆ ಓಪನ್ ಚಾಲೆಂಜ್ ಕೊಟ್ಟ ಅಶೋಕ್, ಐದೈದು ವರ್ಷ ಟ್ಯಾಲಿ ಮಾಡೋಣ ಮೋದಿ ಮತ್ತು ಮನಮೋಹನ್ ಸಿಂಗ್ ಅನುದಾನ ಟ್ಯಾಲಿ ಮಾಡೋಣ. ಮನಮೋಹನ್ ಸಿಂಗ್ 10 ವರ್ಷದಲ್ಲಿ ಕರ್ನಾಟಕಕ್ಕೆ ಕೊಟ್ಟದ್ದೆಷ್ಟು? ನಾನು ಚರ್ಚೆ ಮಾಡೋದಕ್ಕೆ ಸಿದ್ಧನಿದ್ದೇನೆ. ಸಿದ್ದರಾಮಯ್ಯ ಡೀಟೇಲ್ಸ್ ತಗೊಂಡು ಬರಲಿ ಅಭಿವೃದ್ಧಿ, ಬರ, ನರೆ, ರಸ್ತೆಯ ಅನುದಾದ ಲೆಕ್ಕ ಕೊಡಿ ದಾಖಲೆ ತಂದು ಮಾತನಾಡಿ ಎಂದರು.
ಸಿದ್ದರಾಮಯ್ಯ ಜ್ಯೋತಿಷ್ಯಾಲಯವನ್ನು ಜನ ಮುಚ್ಚಿದ್ದಾರೆ. ಉಪಚುನಾವಣೆಯಲ್ಲಿ 12 ಎಂಎಲ್ ಎ ಗೆದ್ದಾಗ ಜ್ಯೋತಿಷ್ಯಾಲಯ ಮುಚ್ಚಿದೆ. ನಿಜ ಸಂಗತಿ, ಅಂಕಿ ಅಂಶ ಇಟ್ಕೊಂಡು ಸಿದ್ದರಾಮಯ್ಯ ಮಾತನಾಡಿಲಿ. ಸುಮ್ನೆ ಹಾದಿ ಬೀದಿಯಲ್ಲಿ ಮಾತಾಡಿ ಏನೂ ಸಾಧಿಸಲಾಗದು ಎಂದು ಟಾಂಗ್ ಕೊಟ್ಟಿದ್ದಾರೆ.