ಕರ್ನಾಟಕ

karnataka

By

Published : Mar 3, 2022, 3:53 PM IST

ETV Bharat / state

ಉಡುಪಿಯಲ್ಲಿ ಭೀಕರ ಅಪಘಾತ : ಯಾಣ ನೋಡಲು ಬಂದು ಜೀವನದ ಪಯಣ ಮುಗಿಸಿದ ಯುವಕ

ಬೈಂದೂರು ತಾಲೂಕಿನ ಕಿರುಮಂಜೇಶ್ವರನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದರೆ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಭೀಕರ ರಸ್ತೆ ಅಪಘಾತ
ಭೀಕರ ರಸ್ತೆ ಅಪಘಾತ

ಉಡುಪಿ: ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಯುವಕ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೈಂದೂರು ತಾಲೂಕಿನ ಕಿರುಮಂಜೇಶ್ವರದಲ್ಲಿ ಸಂಭವಿಸಿದೆ.

ಅಕ್ಷಯ್​ ಮೃತ ಯುವಕ. ತೇಜಸ್​, ಪವನ್​​, ಹರ್ಷ ಗಂಭೀರವಾಗಿ ಗಾಯಗೊಂಡಿರುವ ಯುವಕರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು ಮೂಲದ ಈ ನಾಲ್ವರು ಸ್ನೇಹಿತರು, ಪ್ರವಾಸಕ್ಕೆಂದು ಯಾಣಕ್ಕೆ ಬಂದಿದ್ದರು. ಪ್ರವಾಸ ಮುಗಿಸಿ ಬೆಂಗಳೂರಿಗೆ ತೆರಳುವ ವೇಳೆ ಈ ಘಟನೆ ನಡೆದಿದೆ. ಈ ಸಂಬಂಧ ಬೈಂದೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details