ಕರ್ನಾಟಕ

karnataka

ETV Bharat / state

ಉಡುಪಿಯಲ್ಲಿ ಇಂದಿನಿಂದ ‌144 ಸೆಕ್ಷನ್ ಜಾರಿ‌: ಜಿಲ್ಲಾಡಳಿತಕ್ಕೆ ತಲೆನೋವಾದ ಮೆಹಂದಿ - ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ‌144 ಸೆಕ್ಷನ್ ಜಾರಿ‌,

ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ‌144 ಸೆಕ್ಷನ್ ಜಾರಿ‌ಯಾಗಿದ್ದು, ಜಿಲ್ಲಾಡಳಿತಕ್ಕೆ ಮೆಹಂದಿ ಕಾರ್ಯಕ್ರಮ ತಲೆನೋವಾಗಿ ಪರಿಣಮಿಸಿದೆ.

Section 144 implemented, Section 144 implemented in Udupi district, Udupi corona news, 144 ಸೆಕ್ಷನ್ ಜಾರಿ‌, ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ‌144 ಸೆಕ್ಷನ್ ಜಾರಿ‌, ಉಡುಪಿ ಕೊರೊನಾ ಸುದ್ದಿ,
ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ‌144 ಸೆಕ್ಷನ್ ಜಾರಿ‌

By

Published : May 24, 2021, 11:21 AM IST

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ‌ನಿಷೇಧಾಜ್ಞೆ ಜಾರಿಯಾಗಿದ್ದು, ಜೂನ್ 7ರವರೆಗೆ ಮುಂದುವರಿಯಲಿದೆ ಎಂದು ಡಿಸಿ ಜಗದೀಶ್ ಹೇಳಿದ್ದಾರೆ.

ಇಂದು ಬೆಳಿಗ್ಗೆ 6 ರಿಂದ ಜೂನ್ 7ರ ಬೆಳಿಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಾಗಲಿದ್ದು, ಅನಗತ್ಯ ತಿರುಗಾಟಕ್ಕೆ ಸಂಪೂರ್ಣ ಬ್ರೇಕ್ ಹಾಕುವುದು ಜಿಲ್ಲಾಡಳಿತದ ಉದ್ದೇಶವಾಗಿದೆ. ತುರ್ತು ಸೇವೆಗಳಿಗೆ ‌ಮಾತ್ರ ಅವಕಾಶ ನೀಡಿದ್ದು ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರ ಜನರು ಅಗತ್ಯ ಸೇವೆಗಳಿಗೆ ತೆರಳಬಹುದು. ಹೋಟೆಲ್​ ಪಾರ್ಸೆಲ್​ಗಳಿಗೆ ಕಾಲ್ನಡಿಗೆಯಲ್ಲಿ ತೆರಳಬೇಕು. ಉಳಿದಂತೆ ಸರ್ಕಾರದ ಮಾರ್ಗಸೂಚಿಯಂತೆ ನಿಯಮ ಜಾರಿಯಲ್ಲಿರಲಿದೆ.

ಜನರ ಸಹಕಾರಕ್ಕೆ ಧನ್ಯವಾದ

ಉಡುಪಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ಜನರ ಸಹಕಾರಕ್ಕೆ ಧನ್ಯವಾದ ಹೇಳುತ್ತೇನೆ. ಇದೇ ರೀತಿ ಸಹಕಾರ ನೀಡಿದರೆ ಇನ್ನೊಂದು ಲಾಕ್​ಡೌನ್​ಗೆ ಹೋಗುವುದು ತಪ್ಪಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಹೇಳಿದ್ದಾರೆ.

ಡಿಸಿ ಜಗದೀಶ್ ಹೇಳಿಕೆ

ನಾನು ಜಿಲ್ಲೆಯ ಅನೇಕ ಸೋಂಕಿತರ ಮನೆಗಳಿಗೆ ಮತ್ತು ಐಸೊಲೇಟೆಡ್ ಆದವರನ್ನು ಸಂಪರ್ಕಿಸಿದ್ದೇನೆ. ಇಲ್ಲಿ ತಿಳಿದ ವಿಷಯವೆಂದರೆ ಮದುವೆ ಸಮಾರಂಭಗಳಿಗೆ ಮೆಹಂದಿ‌ ಸೇರಿದಂತೆ ಮತ್ತಿತರ ಕಾರ್ಯಕ್ರಮಗಳಿಗೆ ಹೋದವರಿಗೆ ಸೋಂಕು ತಗಲುವುದು ಕಂಡುಬರುತ್ತಿದೆ. ಗುಂಪಾಗಿ ಅಗತ್ಯ ವಸ್ತು ಖರೀದಿಸುವವರಿಗೂ ಸೋಂಕು ಕಂಡು ಬರುತ್ತಿದೆ. ಆದ್ದರಿಂದ ಯಾವುದೇ ಸಮಾರಂಭಗಳಿಗೂ ಹೋಗಬೇಡಿ. ಗುಂಪು ಸೇರಬೇಡಿ. ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಇದೇ ಸಹಕಾರ ಮುಂದೆಯೂ ಇರಲಿ. ಸಹಕಾರ ನೀಡುತ್ತಿರುವುದಕ್ಕೆ ಜನತೆಗೆ ಧನ್ಯವಾದ ಹೇಳುತ್ತೇನೆ ಎಂದು ಡಿಸಿ ಹೇಳಿದ್ದಾರೆ.

ಮೆಹಂದಿ ಕಾಟ

ಕೊರೊನಾ ಲಾಕ್​ಡೌನ್ ಕಠಿಣ ನಿಯಮಗಳ ನಡುವೆ ಉಡುಪಿಯಲ್ಲೀಗ ಮೆಹಂದಿ ಕಾಟ ಶುರುವಾಗಿದೆ. ಹೊಸ ನಿಯಮದ ಪ್ರಕಾರ 40 ಜನ ಮದುವೆಯಲ್ಲಿ ಭಾಗಿಯಾಗಬಹುದು. ಕರಾವಳಿಯಲ್ಲಿ ಮದುವೆಗೆ ಮುನ್ನಾದಿನ ಮೆಹಂದಿ ಶಾಸ್ತ್ರ ಇರುತ್ತದೆ. ಮೆಹಂದಿಗೆ ಉಡುಪಿಯಲ್ಲಿ ವಿಶೇಷ ಒತ್ತು ಕೊಡಲಾಗುತ್ತದೆ. ಇದೀಗ ಮೆಹಂದಿ ಜಿಲ್ಲಾಡಳಿತಕ್ಕೆ ಮತ್ತು ಮದುವೆ ಆಗುವ ಕುಟುಂಬಗಳಿಗೆ ಟೆನ್ಶನ್ ತಂದಿಟ್ಟಿದೆ.

ಮದುವೆಗೆ ಮಾತ್ರ ಜಿಲ್ಲಾಡಳಿತ ಪರವಾನಿಗೆ ಕೊಡುತ್ತದೆ. ಪರವಾನಿಗೆ ಪಡೆದ ಕುಟುಂಬದವರು ಮೆಹಂದಿಯನ್ನು ಆಚರಿಸುತ್ತಾರೆ. ಇದೀಗ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಉಡುಪಿ ಡಿಸಿ ಜಿ. ಜಗದೀಶ್, ಮೆಹಂದಿಗೆ ಅನುಮತಿ‌ ನೀಡಿಲ್ಲ. ಅನುಮತಿ‌ ಇಲ್ಲದೆ ಕಾರ್ಯಕ್ರಮ ಮಾಡಿದ್ರೆ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ವಿಡಿಯೋ, ಫೊಟೋಗ್ರಾಫರ್ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಮೆಹಂದಿ ಆಚರಿಸಿದ್ದಕ್ಕೆ ಒಂದು ಎಫ್​ಐಆರ್ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕುಂದಾಪುರದ ಅಸೋಡಿಯಲ್ಲಿ ಏಳು ಯುವಕರು ಮಾಸ್ಕ್ ಧರಿಸದೆ ಹುಲಿ‌ ಕುಣಿತ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನೂರಾರು ಜನ ಸುತ್ತಮುತ್ತಲಿನ ಮನೆಯವರು ಸೇರಿ ಮೆಹಂದಿ ಆಚರಿಸುವುದು ಸಾಮಾನ್ಯವಾಗಿದೆ. ಈ ಬಗ್ಗೆ ಹಲವಾರು ದೂರುಗಳು ಬಂದ ನಂತರ ತಹಶೀಲ್ದಾರರು, ಪಿಡಿಒಗಳಿಗೆ ಅಧಿಕಾರ ಕೊಡಲಾಗಿದೆ ಎಂದರು.

ABOUT THE AUTHOR

...view details