ಕರ್ನಾಟಕ

karnataka

By

Published : Sep 28, 2019, 2:22 PM IST

ETV Bharat / state

ಅಪಘಾತದಲ್ಲಿ ಗಾಯಗೊಂಡವರನ್ನ ತಮ್ಮ ಕಾರಿನಲ್ಲಿಯೇ ಕರೆದೊಯ್ದು ಆಸ್ಪತ್ರೆಗೆ ದಾಖಲು.. ಮಾನವೀಯತೆ ಮೆರೆದ ಶ್ರೀರಾಮಲು

ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಆರೋಗ್ಯ ಸಚಿವ ಶ್ರೀರಾಮಲು ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸಂದರ್ಭ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಆರೋಗ್ಯ ಸಚಿವ ಶ್ರೀರಾಮಲು

ಉಡುಪಿ:ಜಿಲ್ಲಾ ಪ್ರವಾಸದಲ್ಲಿರುವ ಆರೋಗ್ಯ ಸಚಿವ ಶ್ರೀರಾಮಲು ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸಂದರ್ಭ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಮಾನವೀಯತೆ ಮೆರೆದ ಆರೋಗ್ಯ ಸಚಿವ ಶ್ರೀರಾಮಲು..

ಕೋಟೇಶ್ವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ಮಾರ್ಗ ಮಧ್ಯದಲ್ಲಿ ನಡೆದಿದ್ದು, ಡಿವೈಡರ್​ಗೆ ಡಿಕ್ಕಿಯಾಗಿ ರಿಕ್ಷಾವೊಂದು ಮಗುಚಿ ಬಿದ್ದು ಅದರಲ್ಲಿದ್ದ ಮೂವರಿಗೆ ಗಾಯಗಳಾಗಿತ್ತು. ಅಪಘಾತ ಗಮನಿಸಿ ಸ್ಥಳಕ್ಕೆ ಧಾವಿಸಿ ಶಾಸಕ ರಘುಪತಿ ಭಟ್ ಗಾಯಾಳುಗಳಿಗೆ ನೀರು ಕುಡಿಸಿದರು. ಬಳಿಕ ಗಾಯಗೊಂಡ ಮೂವರನ್ನು ಸಚಿವ ಶ್ರೀರಾಮುಲು ಆಸ್ಪತ್ರೆಗೆ ದಾಖಲಿಸಿದರು.

ಇನ್ನು, ಗಾಯಾಳುಗಳನ್ನು ತಾವೇ ಎತ್ತಿ ಕಾರಿನಲ್ಲಿ ಕೂರಿಸಿದ ಸಚಿವರು ಮತ್ತು ಶಾಸಕ ರಘುಪತಿ ಭಟ್, ತಮ್ಮ ಕಾರಿನಲ್ಲಿಯೇ ಅವರನ್ನ ಆಸ್ಪತ್ರೆಗೆ ದಾಖಲಿಸಿದರು.

ABOUT THE AUTHOR

...view details