ಕರ್ನಾಟಕ

karnataka

ETV Bharat / state

ಕನ್ನಡ ಧ್ವಜ ಹಾರಿಸದಂತೆ ಯಾವುದೇ ಸುತ್ತೋಲೆ ಬಂದಿಲ್ಲ: ಬಸವರಾಜ ಬೊಮ್ಮಾಯಿ ಸ್ಪಷ್ಟನೆ - There is no circular against kannada flag hosting Basvaraja Bommai

ಕನ್ನಡ ಧ್ವಜದ ಬದಲು ರಾಷ್ಟ್ರಧ್ವಜ ಹಾರಿಸಬೇಕೆಂದು ರಾಜ್ಯ ಸರ್ಕಾರ ಯಾವುದೇ ಸುತ್ತೋಲೆ ಹೊರಡಿಸಿಲ್ಲ. ಇಲ್ಲಿ ಹಿಂದಿನಿಂದಲೂ ರಾಷ್ಟ್ರಧ್ವಜ ಹಾರಿಸಲಾಗ್ತಿದೆ. ಅದೇ ರೀತಿ ಈ ವರ್ಷವೂ ಹಾರಿಸಲಾಗಿದೆ ಎಂದು ಉಡುಪಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ

By

Published : Nov 1, 2019, 5:16 PM IST

ಉಡುಪಿ:ಕನ್ನಡ ರಾಜ್ಯೋತ್ಸವದಂದು ಈ ದಿನ ಕನ್ನಡ ಧ್ವಜ ಹಾರಿಸಿಲ್ಲ, ಬದಲಾಗಿ ರಾಷ್ಟ್ರಧ್ವಜ ಹಾರಿಸಲಾಗಿದೆ. ಮುಂದಿನ ವರ್ಷ ಎರಡೂ ಬಾವುಟಗಳನ್ನು ಹಾರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ

'ಯಾವುದೇ ಸುತ್ತೋಲೆ ಬಂದಿಲ್ಲ'

ಜಿಲ್ಲಾಡಳಿತದಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಕನ್ನಡ ಧ್ವಜದ ಬದಲು ರಾಷ್ಟ್ರ ಧ್ವಜ ಹಾರಿಸಬೇಕೆಂದು ರಾಜ್ಯ ಸರ್ಕಾರ ಯಾವುದೇ ಸುತ್ತೋಲೆ ಹೊರಡಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಯಾವುದೇ ಸುತ್ತೋಲೆ ಸ್ವೀಕರಿಸಿಲ್ಲ. ಇಲ್ಲಿ ಹಿಂದಿನಿಂದಲೂ ರಾಷ್ಟ್ರ ಧ್ವಜ ಹಾರಿಸಲಾಗ್ತಿದೆ. ಮುಂದಿನ ವರ್ಷದಿಂದ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸ್ತೇವೆ ಎಂಬ ಭರವಸೆ ಕೊಟ್ಟರು.

'ಸೈಬರ್ ಠಾಣೆಗಳನ್ನು ಹೆಚ್ಚಿಸುತ್ತೇವೆ'

ದೇಶದಲ್ಲಿ ಡಿಜಿಟಲೈಸೇಶನ್ ಹೆಚ್ಚಾಗಿರುವುದರಿಂದ ಹಣಕಾಸು ವಿನಿಮಯಗಳೆಲ್ಲಾ ಆನ್‌ಲೈನ್ ಮುಖಾಂತರ ನಡೆಯುತ್ತಿದೆ. ಹೀಗಾಗಿ ಸೈಬರ್ ಕ್ರೈಂ ಹೆಚ್ಚಾಗಿದೆ. ಕರ್ನಾಟಕ ಐಟಿ ಕ್ಷೇತ್ರದಲ್ಲಿ ಬಹಳಷ್ಟು ಮುಂದೆ ಇರುವುದರಿಂದ ಇಲ್ಲಿ ಡಿಜಿಟಲೈಸೇಶನ್ ಮಿಸ್ ಯೂಸ್ ಆಗುತ್ತಿದೆ. ಆದ್ದರಿಂದ ರಾಜ್ಯದಲ್ಲಿ ಸೆನ್ ಪೊಲೀಸ್ ಠಾಣೆಗಳ ಸಂಖ್ಯೆ ಹೆಚ್ಚು ಮಾಡುತ್ತೇವೆ. ಇಸ್ರೇಲಿ ಗೂಢಚರ್ಯೆಯನ್ನು ಕೂಡಾ ಪತ್ತೆ ಮಾಡುತ್ತೇವೆ ಎಂದರು.

ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ:

ರಾಜ್ಯದಲ್ಲಿ ನೆಲೆಸಿರುವ ಅಕ್ರಮ ಬಾಂಗ್ಲಾ ವಲಸಿಗರಲ್ಲಿ 300 ಜನರ ವಿಚಾರಣೆ ಮಾಡಿದ್ದೇವೆ. ಯಾವುದೇ ಗುರುತು ಚೀಟಿ ಇಲ್ಲದ 69 ಜನರನ್ನು ಪತ್ತೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

'ಪ್ರಶಸ್ತಿ ವಿಚಾರದಲ್ಲಿ ರಾಜಕೀಯವಿಲ್ಲ'

ರಾಜ್ಯೋತ್ಸವ ಪ್ರಶಸ್ತಿ, ಅರ್ಹ ಸಾಧಕರಿಗೆ ಕೊಡಲಾಗಿದೆ. ಪ್ರಶಸ್ತಿ ವಿಚಾರದಲ್ಲಿ ರಾಜಕೀಯ ಬೆರೆಸಿಲ್ಲ. ರಾಜಕಾರಣಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ರು.

'ಟಿಪ್ಪುಪಠ್ಯದ ಬಗ್ಗೆ ಇನ್ನೂ ನಿರ್ಣಯ ಮಾಡಿಲ್ಲ'

ಟಿಪ್ಪು ಪಾಠ ರದ್ಧತಿ ಪ್ರಸ್ತಾವ ಕುರಿತು ಮಾತನಾಡಿ, ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿಲ್ಲ. ವಿವಾದಾತ್ಮಕ ವಿಚಾರ ಮಕ್ಕಳಿಗೆ ತಿಳಿಸಬಾರದೆಂಬುದು ಸರ್ಕಾರದ ಉದ್ದೇಶ. ಟಿಪ್ಪುವಿನ ವಿಚಾರಗಳು ಹಿಂದೆ ಪ್ರಚಲಿತದಲ್ಲಿ ಇರಲಿಲ್ಲ. ಸಿಎಂ ಈ ಬಗ್ಗೆ ಪರಿಶೀಲನೆ ಮಾಡಬೇಕೆಂದು ಹೇಳಿದ್ದಾರೆ. ಸರ್ಕಾರ ಈವರೆಗೆ ಯಾವುದೇ ನಿರ್ಣಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details