ಕರ್ನಾಟಕ

karnataka

ETV Bharat / state

ಉಡುಪಿ ಲಾಕ್​​ಡೌನ್​​​​ ಬಗ್ಗೆ ನಾಳೆ ತೀರ್ಮಾನ: ಜಿಲ್ಲಾಧಿಕಾರಿ ಜಗದೀಶ್ - tomorrow will announce about Udupi lockdown decision

ಲಾಕ್​ಡೌನ್​ ಆದೇಶ ಹೊರಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳಲು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿದ್ದಾರೆ. ಆಯಾ ಜಿಲ್ಲೆಗಳ ಜಿಲ್ಲಾಡಳಿತವೇ ಲಾಕ್​ಡೌನ್ ಬಗ್ಗೆ ನಿರ್ಣಯ ಕೈಗೊಳ್ಳಲಿವೆ ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.

ಜಿಲ್ಲಾಧಿಕಾರಿ ಜಗದೀಶ್
ಜಿಲ್ಲಾಧಿಕಾರಿ ಜಗದೀಶ್

By

Published : Jul 13, 2020, 9:09 PM IST

ಉಡುಪಿ: ಉಡುಪಿಯಲ್ಲಿ ಲಾಕ್​ಡೌನ್ ಬಗ್ಗೆ ನಾಳೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಡಿ.ಸಿ ಜಗದೀಶ್ ಹೇಳಿದ್ದಾರೆ.

ಜಿಲ್ಲಾಧಿಕಾರಿ ಜಗದೀಶ್

ನಾಳೆ ಬೆಳಿಗ್ಗೆ ಉಡುಪಿಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ನಡೆಯಲಿದೆ. ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ಅಂತಿಮ ನಿರ್ಣಯಕ್ಕೆ ಬರಲಿದ್ದೇವೆ. ಮುಖ್ಯಮಂತ್ರಿಗಳು ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಈ ಅಧಿಕಾರ ನೀಡಿದ್ದಾರೆ. ಆಯಾ ಜಿಲ್ಲೆಗಳ ಜಿಲ್ಲಾಡಳಿತವೇ ಲಾಕ್​ಡೌನ್ ಬಗ್ಗೆ ನಿರ್ಣಯ ಕೈಗೊಳ್ಳಲಿವೆ. ನಾಳೆ ಲಾಕ್​​ಡೌನ್ ಸಾಧಕ-ಬಾಧಕದ ಬಗ್ಗೆ ಚರ್ಚೆ ಮಾಡಲಿದ್ದೇವೆ ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.

ABOUT THE AUTHOR

...view details