ಕರ್ನಾಟಕ

karnataka

ETV Bharat / state

ಈಜಲು ಹೋಗಿ ಕಾಣೆಯಾಗಿದ್ದ ಇಬ್ಬರು ಯುವಕರ ಮೃತದೇಹಗಳು ಪತ್ತೆ - ಉಡುಪಿಯಲ್ಲಿ ಇಬ್ಬರು ಯುವಕರ ಮೃತದೇಹಗಳು ಪತ್ತೆ

ನದಿಗೆ ಈಜಲು ಹೋಗಿ ನಿನ್ನೆ ಕಾಣೆಯಾಗಿದ್ದ ಇಬ್ಬರು ಯುವಕರ ಮೃತದೇಹಗಳು ಇಂದು ಪತ್ತೆಯಾಗಿವೆ.

Two youths dead body found in river
ಇಬ್ಬರು ಯುವಕರ ಮೃತದೇಹ ಪತ್ತೆ

By

Published : Oct 20, 2021, 8:07 PM IST

ಉಡುಪಿ: ನದಿಗೆ ಬಿದ್ದು ಕಾಣೆಯಾಗಿದ್ದ ಇಬ್ಬರು ಯುವಕರ ಮೃತದೇಹಗಳು ಇಂದು ಪತ್ತೆಯಾಗಿವೆ. ಮೃತರನ್ನು ಅನಾಸ್(16), ಶ್ರೇಯಸ್ (18) ಎಂದು ಗುರುತಿಸಲಾಗಿದೆ.

ಈಜಲು ಹೋಗಿ ಕಾಣೆಯಾಗಿದ್ದ ಇಬ್ಬರು ಯುವಕರ ಮೃತದೇಹ ಪತ್ತೆ

ಉಗ್ಗೇಲುಬೆಟ್ಟು ಮಡಿಸಾಲು ಬಳಿ ಮಂಗಳವಾರ ನದಿಗೆ ಈಜಲು ಮೂವರು ಯುವಕರು ತೆರಳಿದ್ದರು. ಈ ಪೈಕಿ ಇಬ್ಬರು ನೀರುಪಾಲಾಗಿದ್ದರು. ಒಬ್ಬ ಯುವಕ ಅಪಾಯದಿಂದ ಪಾರಾಗಿದ್ದ, ಬಳಿಕ ಯುವಕ ನೀರುಪಾಲಾದವರ ಬಗ್ಗೆ ಮಾಹಿತಿ ನೀಡಿದ್ದನು.

ಇಬ್ಬರು ಯುವಕರ ಮೃತದೇಹ ಪತ್ತೆ

ಈ ಸಂಬಂಧ ಕಾಣೆಯಾದ ಬಗ್ಗೆ ಯುವಕರ ಪೋಷಕರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ನಿನ್ನೆ ಸಂಜೆಯಿಂದ ಈಜುಪಟು ಈಶ್ವರ್ ಅವರನ್ನು ಕರೆಸಿಕೊಂಡು ಕಾರ್ಯಾಚರಣೆ ನಡೆಸಲಾಗಿತ್ತು. ಇಂದು ನದಿಯಲ್ಲಿ ಇಬ್ಬರ ಯುವಕರ ಶವಗಳು ಪತ್ತೆಯಾಗಿವೆ.

ABOUT THE AUTHOR

...view details