ಉಡುಪಿ: ಉಡುಪಿ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ ಸಿಬ್ಬಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಉಡುಪಿ ಇಂದ್ರಾಳಿ ನಿವಾಸಿ ರಾಘವೇಂದ್ರ ಕೋವಿಡ್ ನಿಂದ ಮೃತಪಟ್ಟವರು.
ಉಡುಪಿ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ ಸಿಬ್ಬಂದಿ ಕೋವಿಡ್ಗೆ ಬಲಿ - Udupi coronavirus condition overview
ಉಡುಪಿಯಲ್ಲಿಯೂ ಕೊರೊನಾ ಅಟ್ಟಹಾಸ ಮುಮದುವರೆದಿದ್ದು, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ ಸಿಬ್ಬಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.
![ಉಡುಪಿ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ ಸಿಬ್ಬಂದಿ ಕೋವಿಡ್ಗೆ ಬಲಿ Udupi City and Rural Planning Department staff dead by corona](https://etvbharatimages.akamaized.net/etvbharat/prod-images/768-512-11602103-924-11602103-1619857675781.jpg)
ಉಡುಪಿ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ ಸಿಬ್ಬಂದಿ ಕೋವಿಡ್ಗೆ ಬಲಿ
ಮಣಿಪಾಲ ರಜತಾದ್ರಿಯಲ್ಲಿರುವ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಕಳೆದ ಐದು ದಿನಗಳ ಹಿಂದೆ ಕೋವಿಡ್ ಸೋಂಕಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು.
ಚಿಕಿತ್ಸೆ ಫಲಕಾರಿಯಾಗದೆ ಇಂದು ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.