ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ನೀರಿನಲ್ಲಿ ಶಾಲಾ ವಿದ್ಯಾರ್ಥಿನಿ ಕೊಚ್ಚಿ ಹೋಗಿದ್ದ ಪ್ರಕರಣದ ಸ್ಥಳಕ್ಕೆ ಜಿಲ್ಲಾಧಿಕಾರಿ ಕೂರ್ಮರಾವ್ ಭೇಟಿ ನೀಡಿದರು. ಈ ವೇಳೆ ಗ್ರಾಮದ ಸಮಸ್ಯೆಗಳ ಪರಿಹರಿಸುವ ಬಗ್ಗೆಅವರು ಭರವಸೆ ನೀಡಿದರು.
ಚಪ್ಪರಿಕೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸನ್ನಿಧಿ ನೀರುಪಾಲಾಗಿದ್ದರು. ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ ಹಳ್ಳಕ್ಕೆ ಬಿದ್ದು, ಇದುವರೆಗೆ ಪತ್ತೆಯಾಗಿಲ್ಲ.