ಉಡುಪಿ:ದನದ ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದ ವೇಳೆ ಮಣ್ಣಿನ ಗೋಡೆ ಕುಸಿದುಬಿದ್ದು, ಮಹಿಳೆ ಮೃತಪಟ್ಟಿರುವ ಘಟನೆ ಚೇರ್ಕಾಡಿ ಗ್ರಾಮದ ಬೆನಗಲ್ ಎಂಬಲ್ಲಿ ನಡೆದಿದೆ.
ಕೊರಗ ಮರಕಾಲ ಎಂಬುವರ ಪತ್ನಿ ಗಂಗಾಮರಕಾಲ್ತಿ (52) ಮೃತ ಮಹಿಳೆ. ನಿರಂತರ ಮಳೆಯಿಂದ ನೆಂದಿದ್ದ ಗೋಡೆ ಕುಸಿದಿದೆ. ಹಸುವಿನ ಹಾಲು ಕರೆಯುತ್ತಿದ್ದ ಗಂಗಾ ಅವರು ಗೋಡೆಯ ಅವಶೇಷಗಳಡಿ ಸಿಲುಕಿ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಪೇತ್ರಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದ್ದರು.