ಭಟ್ಕಳ: ತಾಲೂಕಿನ ವಿವಿಧೆಡೆ ಕೊರೊನಾ ಹಿನ್ನೆಲೆ ಒಂದೇ ದಿನ ಅತ್ಯಂತ ಸರಳವಾಗಿ ಗಣೇಶ ಹಬ್ಬ ಆಚರಿಸಿದ್ದು, ನಿಮಜ್ಜನ ಕಾರ್ಯಕ್ರಮವೂ ಕೂಡ ಶಾಂತಿಯುತವಾಗಿ ನಡೆದಿದೆ.
ಕೋವಿಡ್-19ನ್ನು ನಿಯಂತ್ರಿಸುವ ಸಲುವಾಗಿ ಹಾಗೂ ಧಾರ್ಮಿಕ ಆಚರಣೆಗೂ ಧಕ್ಕೆ ಬಾರದಂತೆ ಸರಳವಾಗಿ ಹಬ್ಬ ಆಚರಣೆ ಮಾಡಲು ಸರ್ಕಾರದಿಂದ ಅವಕಾಶವನ್ನು ಕಲ್ಪಿಸಿಕೊಡಲಾಗಿತ್ತು. ಆದರೆ ಈ ವರ್ಷ ಸಕಾಲಕ್ಕೆ ಮಳೆಯಾಗಿದ್ದರೂ ಸಹ ಕೊರೊನಾ ಭಯದಲ್ಲಿ ರೈತರು ಹಾಗೂ ಪಟ್ಟಣದ ಜನತೆ ಸಂಪ್ರದಾಯದಂತೆ ಇತ್ತ ಹಬ್ಬ ಆಚರಿಸಲೂ ಆಗದೆ, ಬಿಡಲೂ ಆಗದಂತ ಪರಿಸ್ಥಿತಿಯಲ್ಲಿದ್ದರು. ಶನಿವಾರ ಬೆಳಗ್ಗೆ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಭಕ್ತಿಯಿಂದ ಪೂಜಿಸಿದರು.