ಕರ್ನಾಟಕ

karnataka

ETV Bharat / state

ಡಿ.10ರಂದು ಅಂಗನವಾಡಿ ಕಾರ್ಯಕರ್ತೆಯರ ಪಾದಯಾತ್ರೆ.. - ಡಿಸೆಂಬರ್​ 10ರಂದು ಅಂಗನವಾಡಿ ಕಾರ್ಯಕರ್ತೆಯರ ಪಾದಯಾತ್ರೆ

ಕೇಂದ್ರದ ಹೊಸ ಶಿಕ್ಷಣ ನೀತಿ, ಅಂಗನವಾಡಿಯಲ್ಲಿಯೇ ಎಲ್​ಕೆಜಿ, ಯುಕೆಜಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಪ್ರತಿಭಟನಾ ಜಾಥಾ ನಡೆಸಲಾಯಿತು.

Anganwadi activists march on Dec.10
ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

By

Published : Dec 6, 2019, 7:26 PM IST

ಕಾರವಾರ:ಅಂಗನವಾಡಿ ಕೇಂದ್ರಗಳನ್ನು ಉಳಿಸುವುದು ಅಷ್ಟೇ ಅಲ್ಲ.. ಮಕ್ಕಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಅಭಿವೃದ್ಧಿಯಾಗಬೇಕು. ಎಲ್​ಕೆಜಿ ಹಾಗೂ ಯುಕೆಜಿ ಶಿಕ್ಷಣವನ್ನೂ ಅಂಗನವಾಡಿಯಲ್ಲಿಯೇ ನೀಡಬೇಕು ಅಂತಾ ಡಿಸೆಂಬರ್ 10ರಂದು ಬೆಂಗಳೂರಿನಲ್ಲಿ ಜಾಥಾ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಇವತ್ತು ಉತ್ತರಕನ್ನಡದಲ್ಲಿಕರ್ನಾಟಕ ರಾಜ್ಯ ಅಂಗನವಾಡಿ ಜಿಲ್ಲಾ ನೌಕರರು ಸಂಘದಿಂದ ಪ್ರತಿಭಟನಾ ಜಾಥಾ ನಡೆಸಲಾಯಿತು.

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ..

ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ಲಂಡನ್ ಸೇತುವೆ ಬಳಿ ಸೇರಿದ ಸುಮಾರು ನೂರಾರು ನೌಕರರು ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.ಮಾತೃಪೂರ್ಣ ಯೋಜನೆ ಯಶಸ್ವಿಗೆ ಸಹಾಯಕಿಯರನ್ನು ನೀಡಬೇಕು. ಹೊಸ ಶಿಕ್ಷಣ ನೀತಿಯಂತೆ 3 ರಿಂದ 8 ವರ್ಷದ ವರ್ಗೀಕರಣ ನೀತಿಯನ್ನು ಕೈ ಬಿಡಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ₹21 ಸಾವಿರ ಸಂಬಳ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಲಾಯ್ತು.

ABOUT THE AUTHOR

...view details