ಶಿರಸಿ: ಕೇಂದ್ರದಲ್ಲೂ ಬಿಜೆಪಿ ಸರ್ಕಾರವಿದೆ, ರಾಜ್ಯದಲ್ಲೂ ಅವರದೇ ಸರ್ಕಾರವಿದೆ. ಆದ್ರೆ ಸ್ವತಃ ಸಿಎಂ ನೆರೆ ಪರಿಹಾರವನ್ನು ಸಾರ್ವಜನಿಕ ಸಭೆಯಲ್ಲಿ ಕೇಳುವಂತಾಗಿರೋದು ವಿಷಾದನೀಯ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಿವೇದಿತ್ ಆಳ್ವಾ ಬಿಜೆಪಿಗೆ ಟಾಂಗ್ ನೀಡಿದರು.
ಸಾರ್ವಜನಿಕ ಸಭೆಯಲ್ಲಿ ಪಿಎಂಗೆ ಸಿಎಂ ನೆರೆ ಪರಿಹಾರ ಕೇಳಿರುವುದು ವಿಷಾದನೀಯ : ನಿವೇದಿತ್ ಆಳ್ವಾ - ನೆರೆ ಪರಿಹಾರಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ
ಕೇಂದ್ರದಲ್ಲೂ ಬಿಜೆಪಿ ಸರ್ಕಾರವಿದೆ, ರಾಜ್ಯದಲ್ಲೂ ಅವರದೇ ಸರ್ಕಾರವಿದೆ. ಆದ್ರೆ ಸ್ವತಃ ಸಿಎಂ ನೆರೆ ಪರಿಹಾರವನ್ನು ಸಾರ್ವಜನಿಕ ಸಭೆಯಲ್ಲಿ ಕೇಳುವಂತಾಗಿರೋದು ವಿಷಾದನೀಯ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಿವೇದಿತ್ ಆಳ್ವಾ ಬಿಜೆಪಿಗೆ ಟಾಂಗ್ ನೀಡಿದರು.
ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡವರಿಗೆ ಮನೆಗಳ ಹಂಚಿಕೆಯಲ್ಲಿನ ವಿಳಂಬದ ಕುರಿತು ಸಿದ್ದಾಪುರ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ನಂತರ ಮಾತನಾಡಿದ ಆಳ್ವಾ, ರಾಜ್ಯಕ್ಕೆ ಇನ್ನೂ 360 ಕೋಟಿ ರೂ. ಅಷ್ಟು ಜಿಎಸ್ಟಿ ಹಣ ಬಂದಿಲ್ಲ. ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡವರಿಗೆ ಇದುವರೆಗೂ ಮನೆ ಕಟ್ಟಿಸಿಕೊಟ್ಟಿಲ್ಲ. ಅವರಿನ್ನೂ ಶಾಲೆಗಳಲ್ಲೇ ವಾಸವಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಮಳೆಗಾಲ ಮುಗಿದ ಕೂಡಲೇ ಕಾಮಗಾರಿ ಆರಂಭಿಸಿದ್ರೆ, ಮುಂದಿನ ಮಳೆಗಾಲ ಬರೋವರೆಗೆ ಮುಗಿಸಬಹುದಿತ್ತು. ಆದರೆ ಮಳೆಗಾಲ ಕಳೆದು ಇಷ್ಟು ದಿನ ಆದರು ಕೂಡ ಸಭಾಧ್ಯಕ್ಷರಾಗಲಿ, ಸಂಸದರಾಗಲಿ ಇದರ ಬಗ್ಗೆ ಗಮನಿಸುತ್ತಿಲ್ಲ. ಪ್ರಕೃತಿ ವಿಕೋಪದ ಸಮಯದಲ್ಲಿ ಬಂದು ಸಾಂತ್ವನ ಹೇಳಿ ಹೋದ ಮೇಲೆ ವಾಪಸ್ ತಿರುಗಿ ಕೂಡ ನೋಡಿಲ್ಲ. ಇಲ್ಲಾಂದ್ರೆ ಶಾಲೆಯನ್ನೇ ಅವರ ಹೆಸರಿಗೆ ಬರುಯುವ ಯೋಚನೆ ಇದ್ರೆ ಬರೆದು ಅಲ್ಲೇ ಶಾಶ್ವತ ವ್ಯವಸ್ಥೆ ಕಲ್ಪಿಸಿಕೊಡಿ ಎಂದು ವ್ಯಂಗ್ಯವಾಡಿದರು.