ಕರ್ನಾಟಕ

karnataka

ವೇಶ್ಯಾವಾಟಿಕೆ ಮನೆ ಮೇಲೆ ದಾಳಿ: ನಾಲ್ವರು ಆರೋಪಿಗಳ ಬಂಧನ

ಶಿರಸಿಯಲ್ಲಿ ಅಕ್ರಮವಾಗಿ ಮನೆಯಲ್ಲೇ ವೇಶ್ಯವಾಟಿಕೆ ದಂಧೆ ನಡೆಯುತ್ತಿರುವ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ನಾಲ್ವರನ್ನು ಬಂಧಿಸಿ, ಇಬ್ಬರು ಸಂತ್ರಸ್ತೆಯರನ್ನು ರಕ್ಷಿಸಿದ್ದಾರೆ.

By

Published : Mar 10, 2020, 1:56 AM IST

Published : Mar 10, 2020, 1:56 AM IST

arrest of four accused
ವೇಶ್ಯಾವಾಟಿಕೆ ಮನೆ ಮೇಲೆ ದಾಳಿ

ಶಿರಸಿ: ಮನೆಯೊಂದರಲ್ಲಿ ಅಕ್ರಮ ವೇಶ್ಯವಾಟಿಕೆ ದಂಧೆ ನಡೆಯುತ್ತಿರುವ ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ದಾಳಿ ವೇಳೆ ಇಬ್ಬರು ಸಂತ್ರಸ್ತೆಯರನ್ನು ರಕ್ಷಿಸಿದ್ದಾರೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಮರಾಠಿಕೊಪ್ಪದಲ್ಲಿ ನಡೆದಿದೆ.

ಶಿರಸಿಯ ಮರಾಠಿಕೊಪ್ಪದ ಸಾವಿತ್ರಿ ಶಂಕರ ಭಟ್ (56), ಇಲ್ಲಿನ ಅಗಸೆಬಾಗಿಲಿನ ರಾಮಚಂದ್ರ ಗಜಾನನ ನಾಯ್ಕ (59) , ಹೊನ್ನಾವರದ ಲಕ್ಷ್ಮೀಕಾಂತ ನಾಯ್ಕ (22) ಹಾಗೂ ಹುಬ್ಬಳ್ಳಿಯ ಆನಂದ ರೋಣಿಮಠ (57 ) ಬಂಧಿತ ಆರೋಪಿಗಳಾಗಿದ್ದಾರೆ.

ಇವರಿಂದ 2,850 ರೂ. ನಗದು ಮತ್ತು 4 ಮೊಬೈಲ್​​ಗಳನ್ನು ಜಪ್ತಿ ಪಡಿಸಿಕೊಂಡಿದ್ದು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸಾವಿತ್ರಿ ಭಟ್ ಹಾಗೂ ರಾಮಚಂದ್ರ ನಾಯ್ಕ ಹಣಗಳಿಸುವ ಉದ್ದೇಶದಿಂದ ಒತ್ತಾಯ ಪೂರ್ವಕವಾಗಿ ಇಬ್ಬರು ಮಹಿಳೆಯರನ್ನು ವೇಶ್ಯಾವಾಟಿಕೆಯಲ್ಲಿ ತೊಡಗಿಸಿದ್ದರು. ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details