ಕರ್ನಾಟಕ

karnataka

ETV Bharat / state

ಯಲ್ಲಾಪುರ ಉಪ ಚುನಾವಣೆ: ಕಾಂಗ್ರೆಸ್​ನಿಂದ ಭೀಮಣ್ಣ ನಾಯ್ಕ ನಾಮಪತ್ರ ಸಲ್ಲಿಕೆ - Yallapur by election

ಈ ಹಿಂದೆ ಶಿರಸಿ-ಸಿದ್ದಾಪುರ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಯಾಗಿದ್ದ ಭೀಮಣ್ಣ ನಾಯ್ಕ ಕ್ಷೇತ್ರ ಬದಲಿಸಿ ಯಲ್ಲಾಪುರದ ಕಾಂಗ್ರೆಸ್​ ಅಧಿಕೃತ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕ್ಷೇತ್ರದಲ್ಲಿ ಭೀಮಣ್ಣ ಮತ್ತು ಅನರ್ಹ ಶಾಸಕ ಹೆಬ್ಬಾರ್ ನಡುವೆ ನೇರ ಹಣಾಹಣಿಯಿದ್ದು, ಹೆಬ್ಬಾರ್​ಗೆ ಟಕ್ಕರ್ ನೀಡಲು ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದೆ.

ಕಾಂಗ್ರೆಸ್​ನಿಂದ ಭೀಮಣ್ಣ ನಾಯ್ಕ ನಾಮಪತ್ರ ಸಲ್ಲಿಕೆ

By

Published : Nov 14, 2019, 1:43 PM IST

ಶಿರಸಿ:ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಕಣ ರಂಗೇರಿದೆ. ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಜಿಲ್ಲೆಯ ಹಿರಿಯ ನಾಯಕ, ಮಾಜಿ ಸಚಿವ ಆರ್.ವಿ.ದೇಶಪಾಂಡೆ ಜೊತೆಗೂಡಿ ಯಲ್ಲಾಪುರ ಪಟ್ಟಣದಲ್ಲಿರುವ ಚುನಾವಣಾ ಕಾರ್ಯಾಲಯದಲ್ಲಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್​ನಿಂದ ಭೀಮಣ್ಣ ನಾಯ್ಕ ನಾಮಪತ್ರ ಸಲ್ಲಿಕೆ

ಈ ಹಿಂದೆ ಶಿರಸಿ-ಸಿದ್ದಾಪುರ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಭೀಮಣ್ಣ ನಾಯ್ಕ ಕ್ಷೇತ್ರ ಬದಲಿಸಿ ಯಲ್ಲಾಪುರದ ಕಾಂಗ್ರೆಸ್​ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕ್ಷೇತ್ರದಲ್ಲಿ ಭೀಮಣ್ಣ ಮತ್ತು ಅನರ್ಹ ಶಾಸಕ ಹೆಬ್ಬಾರ್ ನಡುವೆ ನೇರ ಹಣಾಹಣಿಯಿದ್ದು, ಹೆಬ್ಬಾರ್​ಗೆ ಟಕ್ಕರ್ ನೀಡಲು ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದೆ.

ABOUT THE AUTHOR

...view details