ಕಾರವಾರ: ಬಿಜೆಪಿಗರು ದಿನನಿತ್ಯವೂ ಕುರ್ಚಿಗಾಗಿ ದೆಹಲಿ ಪರೇಡ್ ನಡೆಸುತ್ತಿದ್ದಾರೆ ಎನ್ನುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬಿಜೆಪಿ ನಾಯಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಇಂದು ಕಿತ್ತು ಹಾಕುತ್ತೇವೆ, ನಾಳೆ ಕುರ್ಚಿ ಬಿಡ್ತಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಈ ಕಿತ್ತಾಟದಿಂದ ರಾಜ್ಯದಲ್ಲಿ ಕೋವಿಡ್ ನಿಯಂತ್ರಣವನ್ನು ಸಂಪೂರ್ಣ ಮರೆತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.