ಕರ್ನಾಟಕ

karnataka

ETV Bharat / state

ಮಾರುತಿ ನಾಯ್ಕ ಆತ್ಮಹತ್ಯೆ ಪ್ರಕರಣ: ಉತ್ತರಕನ್ನಡದಲ್ಲಿ ಮೂವರು ಪೊಲೀಸರ ಅಮಾನತು - ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅಮಾನತು

ಡೆತ್​ನೋಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಿ ಎಸ್​ಪಿ ವಿಷ್ಣುವರ್ಧನ್ ಆದೇಶ ಮಾಡಿದ್ದಾರೆ.

Etv Bharat
Etv Bharat

By ETV Bharat Karnataka Team

Published : Oct 27, 2023, 2:14 PM IST

Updated : Oct 27, 2023, 2:44 PM IST

ಕಾರವಾರ: ಡೆತ್​ನೋಟ್​ನಲ್ಲಿ ಪೊಲೀಸರ ಹೆಸರು ನಮೂದಿಸಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್​ಪೆಕ್ಟರ್, ಪಿಎಸ್ಐ ಹಾಗೂ ಓರ್ವ ಪೊಲೀಸ್ ಕಾನ್ಸ್​ಟೇಬಲ್​ನನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಕಾರವಾರ ಗ್ರಾಮೀಣ ಠಾಣೆ ಇನ್ಸ್​ಪೆಕ್ಟರ್ ಕುಸುಮಾಧರ್, ಪಿಎಸ್ಐ ಶಾಂತಿನಾಥ, ಕಾನ್‌ಸ್ಟೇಬಲ್ ದೇವರಾಜ ಅಮಾನತುಗೊಂಡವರಾಗಿದ್ದಾರೆ. ಕಾರವಾರ ತಾಲೂಕಿನ ಶಿರವಾಡ ನಿವಾಸಿ ಮಾರುತಿ ನಾಯ್ಕ ಇತ್ತೀಚೆಗೆ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ, ಡೆತ್​ನೋಟ್ ಎರಡನೇ ದಿನ ಲಭ್ಯವಾದ ಕಾರಣ ಪೊಲೀಸರು ಅನುಮಾನ ವ್ಯಕ್ತಪಡಿಸಿ ಡೆತ್​ನೋಟ್ ಅ​ನ್ನು ಎಫ್ಎಸ್​ಎಲ್​ಗೆ ಕಳುಹಿಸಿದ್ದರು. ಆದರೆ, ಇದೀಗ ವಿಡಿಯೋ ಕೂಡ ಲಭ್ಯವಾದ ಕಾರಣ ಐಜಿ ಚಂದ್ರಗುಪ್ತ ಅವರ ಸೂಚನೆಯಂತೆ ಎಸ್ಪಿ ವಿಷ್ಣುವರ್ಧನ್ ಇಲಾಖಾ ತನಿಖೆ ಮುಕ್ತಾಯದವರೆಗೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ದಲಿತ ಮುಖಂಡ ಎಲಿಷಾ ಎಲಕಪಾಟಿ ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿದ್ದನ್ನು ಮಾರುತಿ ನಾಯ್ಕ ವಿಡಿಯೋ ಮಾಡಿ‌ ಬಳಿಕ ದೂರು ನೀಡಿದ್ದರು. ಆದರೆ, ಪ್ರಕರಣ ತನಿಖೆ ನೆಪದಲ್ಲಿ ಪೊಲೀಸರು ಕಿರುಕುಳ ನೀಡಿದ್ದಾಗಿ ಮಾರುತಿ ಡೆತ್​ನೋಟ್ ಹಾಗೂ ವಿಡಿಯೋ ಮೂಲಕ ಆರೋಪಿಸಿದ್ದರು. ಕುಟುಂಬಸ್ಥರು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ತೀವ್ರವಾಗಿ ಆಗ್ರಹಿಸಿದ ಬಳಿಕ ಎಲಿಷಾ ಎಲಕಪಾಟಿ ಸೇರಿದಂತೆ ಮೂವರನ್ನು ಬಂಧಿಸಿದ್ದರು.

ಓದಿ:ಮಾರ್ಗದರ್ಶಿ ಚಿಟ್‌ಫಂಡ್‌ ಶಾಖೆಗಳಿಗೆ ನೀಡಿದ್ದ ಆಂಧ್ರ ಪೊಲೀಸರ ಎಲ್ಲ ನೋಟಿಸ್‌ಗಳನ್ನು ಅಮಾನತುಗೊಳಿಸಿದ ಹೈಕೋರ್ಟ್

ಆನ್​ಲೈನ್​​ ಗೇಮ್ಸ್​​ನಲ್ಲಿ ಒಂದೂವರೆ ಕೋಟಿ ಗೆದ್ದಿದ್ದ ಪಿಎಸ್​ಐ ಅಮಾನತು(ಪುಣೆ): ಇತ್ತೀಚೆಗೆ ಆನ್​ಲೈನ್​ ಗೇಮಿಂಗ್ ಆ್ಯಪ್​ನಲ್ಲಿ ಒಂದೂವರೆ ಕೋಟಿ ರೂಪಾಯಿ ಬಹುಮಾನ ಗೆದ್ದು ಸುದ್ದಿಯಾಗಿದ್ದ ಮಹಾರಾಷ್ಟ್ರದ ಪೊಲೀಸ್​ ಅಧಿಕಾರಿ ಸೋಮನಾಥ್​ ಝೆಂಡೆ ತಲೆದಂಡವಾಗಿತ್ತು. ಅಶಿಸ್ತಿನ ವರ್ತನೆ ಹಾಗೂ ಪೊಲೀಸ್ ಇಲಾಖೆಯ ಪ್ರತಿಷ್ಠೆಗೆ ಕಳಂಕ ತಂದ ಆರೋಪದಡಿ ಸಬ್​ ಇನ್ಸ್​ಪೆಕ್ಟರ್​ ಆಗಿದ್ದ ಸೋಮನಾಥ್ ಅವರನ್ನು ಅಮಾನತುಗೊಳಿಸಿ ಮಹಾರಾಷ್ಟ್ರ ಪೊಲೀಸ್​ ಇಲಾಖೆ ಆದೇಶಿಸಿತ್ತು.

ಪುಣೆಯ ಪಿಂಪ್ರಿ ಚಿಂಚ್​ವಾಡ ನಗರದ ಪೊಲೀಸ್​ ಮುಖ್ಯ ಕಚೇರಿಯಲ್ಲಿ ಪಿಎಸ್​ಐ ಸೋಮನಾಥ್​ ಝೆಂಡೆ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಆನ್​ಲೈನ್​ ಕ್ರಿಕೆಟ್​ ಗೇಮ್​​​​​​ನಲ್ಲಿ 1.5 ಕೋಟಿ ರೂ. ಬಹುಮಾನ ಗೆಲ್ಲುವ ಮೂಲಕ ಸಾಕಷ್ಟು ಸುದ್ದಿಯಾಗಿದ್ದರು. ಇದರ ಬೆನ್ನಲ್ಲೇ ಅವರು ವಿವಾದದ ಸುಳಿಗೂ ಸಿಲುಕಿದ್ದರು. ಇದರಿಂದ ಪೊಲೀಸ್ ಇಲಾಖೆಯು ತನಿಖೆಗೆ ಒಳಪಡಿಸಲಾಗಿತ್ತು. ಇದೀಗ ಈ ತನಿಖಾ ವರದಿ ಬಂದಿದ್ದು, ಇದರ ಆಧಾರದ ಮೇಲೆ ಸೋಮನಾಥ್​ ಝೆಂಡೆ ಅವರನ್ನು ಅಮಾನತುಗೊಳಿಸಲಾಗಿದೆ.

Last Updated : Oct 27, 2023, 2:44 PM IST

ABOUT THE AUTHOR

...view details