ಕಾರವಾರ: ಎರಡು ದಿನದ ಹಿಂದೆ ಹೆರಿಗೆಯಾಗಿದ್ದ ಬಾಣಂತಿಯೊಬ್ಬರು ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ ಖಾಸಗಿ ಆಸ್ಪತ್ರೆಗೆ ಮುತ್ತಿಗೆ ಹಾಕಿ ಮೃತಳ ಸಂಬಂಧಿಕರು ಪ್ರತಿಭಟನೆ ನಡೆಸಿರುವ ಘಟನೆ ಕುಮಟಾ ಪಟ್ಟಣದಲ್ಲಿ ನಡೆಯಿತು.
ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಪ್ರತಿಭಟನೆ - woman died due to doctor negligence
ವೈದ್ಯರ ನಿರ್ಲಕ್ಷದಿಂದಲೇ ಬಾಣಂತಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮೃತಳ ಸಂಬಂಧಿಕರು ಕುಮಟಾ ಖಾಸಗಿ ಆಸ್ಪತ್ರೆಯೊಂದಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
![ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಪ್ರತಿಭಟನೆ ಕುಮಟಾ ಖಾಸಗಿ ಆಸ್ಪತ್ರೆ ಮುಂಭಾಗ ಪ್ರತಿಭಟನೆ](https://etvbharatimages.akamaized.net/etvbharat/prod-images/768-512-15684748-thumbnail-3x2-lek.jpg)
ಕುಮಟಾ ಖಾಸಗಿ ಆಸ್ಪತ್ರೆ ಮುಂಭಾಗ ಪ್ರತಿಭಟನೆ
ಜಯಮಾಲ ಲೋಕೇಶ ಮೀರ್ಜಾನಕರ್(23) ಮೃತ ಮಹಿಳೆ. ಕಳೆದ ಎರಡು ದಿನದ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದ್ದ ಇವರು ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಆದರೆ, ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಮೃತಳ ಕುಟುಂಬಸ್ಥರು, ಆಸ್ಪತ್ರೆಗೆ ಮುತ್ತಿಗೆ ಹಾಕಿ ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನ ಸಮಾಧಾನಪಡಿಸಿದರು. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಮಟಾ ಖಾಸಗಿ ಆಸ್ಪತ್ರೆ ಮುಂಭಾಗ ಪ್ರತಿಭಟನೆ
ಇದನ್ನೂ ಓದಿ:ದಾವಣಗೆರೆ: ಅಪ್ರಾಪ್ತೆ ಜೊತೆ ಹಸೆಮಣೆ ಏರಿದ್ದ ಯುವಕನ ಬಂಧನ