ಕಾರವಾರ: ಸ್ಥಳೀಯರ ವಿರೋಧದಿಂದಾಗಿ ತಾಯಿಯ ಅಂತ್ಯಸಂಸ್ಕಾರ ನಡೆಸಲು ಸಾಧ್ಯವಾಗದೆ ಪರದಾಡುತ್ತಿದ್ದ ಯೋಧ ಕೊನೆಗೂ ಪೊಲೀಸರು ಹಾಗೂ ಅಧಿಕಾರಿಗಳ ನೆರವಿನಿಂದ ನಗರದಲ್ಲಿ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ್ದಾರೆ.
ಜಾರ್ಖಂಡ್ ಮೂಲದ ಯೋಧ ಸುಮಿತ್ ಕುಮಾರ್ ಸೆಹೆಗಲ್ ಎಂಬಾತನ ತಾಯಿ ಅನಿತಾ ದೇವಿ (48) ಕಿಡ್ನಿ ವೈಫಲ್ಯದಿಂದಾಗಿ ಮಂಗಳವಾರ ಮೃತಪಟ್ಟಿದ್ದರು. ಆದರೆ ಕೊರೊನಾದಿಂದಾಗಿ ಸ್ವಂತ ಊರಿಗೆ ಮೃತದೇಹ ಕೊಂಡೊಯ್ಯಲು ಸಾಧ್ಯವಾಗದೇ ಕಾರವಾರ ಚೆಂಡಿಯಾ ಬಳಿ ಅಂತ್ಯ ಸಂಸ್ಕಾರ ನಡೆಸಲು ಮುಂದಾಗಿದ್ದರು. ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಪರವಾನಿಗೆ ಕೂಡ ಪಡೆದಿದ್ದರು. ಆದರೆ ಸ್ಥಳೀಯರು ಕೊರೊನಾ ಆತಂಕದಿಂದಾಗಿ ತಮ್ಮೂರಿನ ಸ್ಮಶಾನದಲ್ಲಿ ಅಂತ್ಯ ಕ್ರಿಯೆ ನಡೆಸಲು ವಿರೋಧ ವ್ಯಕ್ತಪಡಿದ್ದರು.