ಕಾರವಾರ: ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಯೋಜನೆ ವಿರೋಧಿ ಪೋಸ್ಟ್ಗಳನ್ನು ಹರಿಬಿಡಲಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉತ್ತರ ಕನ್ನಡ ಜನರ ಬಹುವರ್ಷಗಳ ಕನಸಾಗಿದ್ದ ರೈಲ್ವೇ ಯೋಜನೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹುಬ್ಬಳ್ಳಿ ಅಂಕೋಲಾ ಯೋಜನೆಯಿಂದ ಸಾವಿರಾರು ಎಕರೆ ಗಿಡಮರಗಳಿಗೆ ಹಾನಿಯಾಗುತ್ತದೆ. ಪ್ರಾಣಿ ಸಂಕುಲಕ್ಕೂ ಸಹ ಹಾನಿಯಾಗಲಿದ್ದು, ಯೋಜನೆ ಬೇಡ ಎನ್ನುವವರು ಅರಣ್ಯ ಇಲಾಖೆಗೆ ಪತ್ರ ಬರೆಯುವಂತೆ ಸಂದೇಶ ಪೋಸ್ಟ್ ಮಾಡುತ್ತಿದ್ದು ಇದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.