ಕರ್ನಾಟಕ

karnataka

ETV Bharat / state

ಅಕ್ರಮ ಜಾನುವಾರು ಸಾಗಾಟ.. ಆರೋಪಿಗಳು ಅಂದರ್ - undefined

ಹಾವೇರಿಯಿಂದ ಉತ್ತರ ಕನ್ನಡದ ಭಟ್ಕಳಕ್ಕೆ ಲಾರಿಯ ಮೂಲಕ ಅಕ್ರಮವಾಗಿ ಕಸಾಯಿ ಖಾನೆಗೆ ಕೊಂಡೊಯ್ಯುತ್ತಿದ್ದ 6 ಲಕ್ಷ ಮೌಲ್ಯದ 13 ಕೋಣಗಳನ್ನು ಉತ್ತರ ಕನ್ನಡದ ಶಿರಸಿಯ ಬನವಾಸಿ ಠಾಣೆ ಪೊಲೀಸರು ರಕ್ಷಿಸಿ, ನಾಲ್ವರು ಆರೋಪಿಗಳನ್ನು ಲಾರಿ ಸಮೇತ ವಶಕ್ಕೆ ಪಡೆದಿದ್ದಾರೆ.

ಅಕ್ರಮ ಜಾನುವಾರು ಸಾಗಟ

By

Published : Jul 13, 2019, 7:32 PM IST

ಶಿರಸಿ: ಕಸಾಯಿ ಖಾನೆಗೆ ಕೊಂಡೊಯ್ಯುತ್ತಿದ್ದ 6 ಲಕ್ಷ ಮೌಲ್ಯದ 13 ಕೋಣಗಳನ್ನು ಉತ್ತರ ಕನ್ನಡದ ಶಿರಸಿಯ ಬನವಾಸಿ ಠಾಣೆ ಪೊಲೀಸರು ರಕ್ಷಿಸಿ, ನಾಲ್ವರು ಆರೋಪಿಗಳನ್ನು ಲಾರಿ ಸಮೇತ ವಶಕ್ಕೆ ಪಡೆದಿದ್ದಾರೆ.

ಹಾವೇರಿಯಿಂದ ಉತ್ತರ ಕನ್ನಡದ ಭಟ್ಕಳಕ್ಕೆ ಲಾರಿಯ ಮೂಲಕ ಅಕ್ರಮವಾಗಿ ಜಾನುವಾರು ಸಾಗಿಸುವಾಗ ದಾಸನಕೊಪ್ಪ ಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ನಡೆಸಿ ಕೋಣಗಳನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ ಆರೋಪಿಗಳಾದ ವೆಂಕಟೇಶ, ಅಹ್ಮದ್ ಅಜೀಮ್ ಸಾಬ್, ಬಶೀರ ಫರ್ಕುದ್ಧೀನ ಸಾಬ್, ವಲಿ ಶೇಖ್ ವಶಕ್ಕೆ ಪಡೆಯಲಾಗಿದ್ದು, ಕೋಣಗಳ ಸಾಗಾಟಕ್ಕೆ ಬಳಸಲಾಗಿದ್ದ ಲಾರಿಯನ್ನು ಸೀಜ್ ಮಾಡಿದ್ದಾರೆ.ಈ ಕುರಿತು ಬನವಾಸಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details