ಭಟ್ಕಳ (ಉತ್ತರ ಕನ್ನಡ): ತಾಲೂಕಿನಾದ್ಯಂತ ಕೊರೊನಾ ಮಹಾಮಾರಿ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆ, ಭಟ್ಕಳ ನಗರದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ವ್ಯವಹಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ತದನಂತರ ಲಾಕ್ಡೌನ್ ಮಾಡುವಂತೆ ಆದೇಶಿಸಲಾಗಿದೆ.
ಭಟ್ಕಳ ಪುರಸಭೆ ವ್ಯಾಪ್ತಿಯಲ್ಲಿ ರೋಗ ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ನಿರ್ಬಂಧಗಳನ್ನು ವಿಧಿಸಿ ಜಿಲ್ಲಾಧಿಕಾರಿ ಡಾ. ಕೆ. ಹರೀಶಕುಮಾರ್ ಆದೇಶಿಸಿದ್ದು, ಈ ಅನ್ವಯ, ಸಾರ್ವಜನಿಕರು ವೈದ್ಯಕೀಯ ಕಾರಣಕ್ಕೆ ಬಿಟ್ಟು ಇತರ ಯಾವುದೇ ಕಾರಣಕ್ಕೂ ಪ್ರತಿದಿನ ಮಧ್ಯಾಹ್ನ 2 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಹೊರಗಡೆ ಸಂಚರಿಸುವಂತಿಲ್ಲ ಎಂದು ತಿಳಿಸಿದ್ದಾರೆ.