ಕರ್ನಾಟಕ

karnataka

ETV Bharat / state

ಬಸ್​ ಚಾಲನೆ ಮಾಡುತ್ತಿರುವಾಗಲೇ ಹೃದಯಾಘಾತ.. ಆದರೂ ಪ್ರಯಾಣಿಕರ ಪ್ರಾಣ ಉಳಿಸಿದ ಡ್ರೈವರ್​ - heart attack for KSRTC bus driver

ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತವಾಗಿದೆ. ಸಮಯ ಪ್ರಜ್ಞೆ ಮೆರೆದ ಡ್ರೈವರ್​​ ಬಸ್​ ನಿಲ್ಲಿಸಿ ಮುಂದಾಗಬಹುದಾದ ಅನಾಹುತ ತಪ್ಪಿಸಿದ್ದಾರೆ.

ksrtc-bus-driver-saves-many-lives-despite-heart-attack
ಬಸ್​ ಚಾಲನೆ ಮಾಡುತ್ತಿರುವಾಗಲೇ ಹೃದಯಾಘಾತ.. ಪ್ರಯಾಣಿಕರ ಪ್ರಾಣ ಉಳಿಸಿದ ಚಾಲಕ

By

Published : Jun 3, 2022, 10:47 PM IST

ಕಾರವಾರ: ಕರ್ತವ್ಯದಲ್ಲಿ ಇದ್ದಾಗಲೇ ಬಸ್ ಚಾಲಕರೊಬ್ಬರಿಗೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮುಂಡಗೋಡ ತಾಲೂಕಿನ ಮೈನಳ್ಳಿ ಬಳಿ ನಡೆದಿದೆ. ಮಲ್ಲಪ್ಪ ಸೋಮಪ್ಪನವರ (45) ಮೃತ ಚಾಲಕನಾಗಿದ್ದಾರೆ.

ಯಲ್ಲಾಪುರದಿಂದ ಮುಂಡಗೋಡಿಗೆ ಬಸ್ ಚಾಲನೆ ಮಾಡುತ್ತಿರುವಾಗ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಬಸ್ ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದಾರೆ. ‌ಬಳಿಕ ಎದೆ ನೋವು ವಿಪರೀತಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ತಪಾಸಣೆ ನಡೆಸಿದ ವೈದ್ಯರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

ಬಸ್​ನಲ್ಲಿ 38 ಮಂದಿ ಪ್ರಯಾಣಿಕರು ಇದ್ದರು ಎನ್ನಲಾಗಿದೆ.‌ ಆದರೆ, ಚಾಲಕ ಮಲ್ಲಪ್ಪ ಸಾವಿನಲ್ಲೂ ಕರ್ತವ್ಯ ಪ್ರಜ್ಞೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ್ದಾರೆ. ಈ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಪಾತ್ರೆಯೊಳಗೆ ಸಿಲುಕಿದ 3 ವರ್ಷದ ಬಾಲಕ : 1 ಗಂಟೆ ಕಾರ್ಯಾಚರಣೆ ಬಳಿಕ ರಕ್ಷಣೆ

For All Latest Updates

ABOUT THE AUTHOR

...view details