ಕರ್ನಾಟಕ

karnataka

ETV Bharat / state

ಶಿರಸಿಯ ಮತ್ತಿಘಟ್ಟದ ಬಳಿ ಭೂ ಕುಸಿತ: ಅಡಿಕೆ ತೋಟಕ್ಕೆ ಹಾನಿ - ಶಿರಸಿ ಬಳಿ ಭೂ ಕುಸಿತ

ಶಿರಸಿ ಬಳಿ ಭೂ ಕುಸಿತ ಉಂಟಾಗಿ ಅಡಿಕೆ ತೋಟಕ್ಕೆ ಹಾನಿಯಾಗಿದೆ.

landslide in Mattigatta of Sirsi
ಶಿರಸಿ ಮತ್ತಿಘಟ್ಟದ ಬಳಿ ಭೂ ಕುಸಿತ

By

Published : Mar 23, 2021, 5:56 PM IST

ಕಾರವಾರ: ಕಳೆದ ಬಾರಿ ಸುರಿದ ಭಾರಿ ಮಳೆಗೆ ಬಿರುಕು ಬಿಟ್ಟಿದ್ದ ಭೂಮಿ ಇಂದು ದಿಢೀರ್ ಕುಸಿದು ಅಡಿಕೆ ತೋಟಕ್ಕೆ ಹಾನಿಯಾಗಿರುವ ಘಟನೆ ಶಿರಸಿ ತಾಲೂಕಿನ ಮತ್ತಿಘಟ್ಟ ಗ್ರಾಮದಲ್ಲಿ ನಡೆದಿದೆ.

ಮತ್ತಿಘಟ್ಟದ ಕೆಳಗಿನ ಕೇರಿಯ ಮಧುಸೂದನ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಭೂ ಕುಸಿತ ಸಂಭವಿಸಿದೆ. ಘಟನೆಯಲ್ಲಿ ಸುಮಾರು ಒಂದು ಎಕರೆ ಅಡಿಕೆ ತೋಟಕ್ಕೆ ಹಾನಿಯಾಗಿದ್ದು, 20 ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ ಎನ್ನಲಾಗಿದೆ.

ಓದಿ : ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ : ಅಪಾರ ಪ್ರಮಾಣದ ಪೊರಕೆ ಬೆಂಕಿಗಾಹುತಿ

ಅದೃಷ್ಟವಶಾತ್ ಘಟನೆಯಿಂದ ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಕಂದಾಯ ಹಾಗೂ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details