ಕರ್ನಾಟಕ

karnataka

By

Published : Jul 1, 2019, 2:40 PM IST

Updated : Jul 1, 2019, 6:08 PM IST

ETV Bharat / state

ಒಳ ಜಗಳದಿಂದಲೇ ಮೈತ್ರಿ ಸರ್ಕಾರ ಪತನ: ಶಾಸಕಿ ರೂಪಾಲಿ ನಾಯ್ಕ

ಪ್ರಸ್ತುತ ಸಮ್ಮಿಶ್ರ ಸರ್ಕಾರದ ಒಳ ಜಗಳದಿಂದಾಗಿಯೇ ಅಂತ್ಯ ಕಾಣಲಿದೆ. ಶಾಸಕರು ಈ ಜಗಳದಿಂದಾಗ ಬೇಸತ್ತು ರಾಜೀನಾಮೆ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಉತ್ತಮ ಅಧಿಕಾರ ನಡೆಸಲಿದೆ ಎಂದು ಬಿಜೆಪಿ ಶಾಸಕಿ ರೂಪಾಲಿ ನಾಯ್ಕ ಹೇಳಿದ್ಧಾರೆ.

ಬಿಜೆಪಿ ಶಾಸಕಿ ರೂಪಾಲಿ ನಾಯ್ಕ್


ಕಾರವಾರ:ಸಮ್ಮಿಶ್ರ ಸರ್ಕಾರದ ಒಳ ಜಗಳದಿಂದ ಬೇಸತ್ತು ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ. ಸದ್ಯದಲ್ಲಿಯೇ ಹೊಸ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಶಾಸಕಿ ರೂಪಾಲಿ ನಾಯ್ಕ​ ಹೇಳಿದ್ದಾರೆ.

ರೂಪಾಲಿ ನಾಯ್ಕ, ಬಿಜೆಪಿ ಶಾಸಕಿ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಅಪೇಕ್ಷೆಯಂತೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಆದರೆ ಬಿಜೆಪಿ ನಾಯಕರು ಯಾವುದೇ ರೀತಿಯಲ್ಲಿ ಸರ್ಕಾರ ಬೀಳಿಸುವ ಕೆಲಸ ಮಾಡುತ್ತಿಲ್ಲ. ಇದು ಪ್ರಸ್ತುತ ಸಮ್ಮಿಶ್ರ ಸರ್ಕಾರದ ಒಳ ಜಗಳದಿಂದಾಗಿಯೇ ಅಂತ್ಯ ಕಾಣಲಿದೆ. ಮುಂದಿನ ದಿನಗಳಲ್ಲಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಉತ್ತಮ ಅಧಿಕಾರ ನಡೆಸಲಿದೆ ಎಂದು ಶಾಸಕಿ ರೂಪಾಲಿ ನಾಯ್ಕ​ ಇದೇ ಸಂದರ್ಭದಲ್ಲಿ ಸರ್ಕಾರ ರಚನೆಯ ಸುಳಿವು ನೀಡಿದರು.

Last Updated : Jul 1, 2019, 6:08 PM IST

For All Latest Updates

TAGGED:

ABOUT THE AUTHOR

...view details