ಕರ್ನಾಟಕ

karnataka

By

Published : Oct 14, 2020, 8:16 PM IST

ETV Bharat / state

ಬೈಕ್, ಲಾರಿ ನಡುವೆ ಡಿಕ್ಕಿ: ಓರ್ವ ಸಾವು, ಇನ್ನೋರ್ವ ಗಂಭೀರ

ರಾಷ್ಟ್ರೀಯ ಹೆದ್ದಾರಿ 66 ರ ಕಾರವಾರದ ಲಂಡನ್ ಸೇತುವೆ ಬಳಿ ಸವಾರನ ನಿಯಂತ್ರಣ ತಪ್ಪಿ ಬೈಕ್ ವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Accident
Accident

ಕಾರವಾರ: ಭಾರೀ ಮಳೆ ಹಿನ್ನೆಲೆ ನಿಯಂತ್ರಣ ತಪ್ಪಿದ ಬೈಕ್​ವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಾರವಾರದ ಲಂಡನ್ ಸೇತುವೆ ಬಳಿ ನಡೆದಿದೆ.

ಆನಂದ್ (25) ಸ್ಥಳದಲ್ಲೇ ಮೃತಪಟ್ಟಿರುವ ಬೈಕ್ ಸವಾರ. ಕೇದಾರನಾಥ (26) ಗಂಭೀರವಾಗಿ ಗಾಯಗೊಂಡ ಹಿಂಬದಿ ಸವಾರ. ಈತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.

ಆನಂದ್ ಮತ್ತು ಕೇದಾರನಾಥ ಇಬ್ಬರು ವಿದ್ಯುತ್ ಗುತ್ತಿಗೆದಾರರೊಬ್ಬರ ಬಳಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕೆಲಸದ ಹಿನ್ನೆಲೆ ಅರಗಾ ಕಡೆಗೆ ತೆರಳುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ಮೀನು ಲಾರಿಗೆ ಡಿಕ್ಕಿಯಾದ ಪರಿಣಾಮ ಈ ದುರಂತ ಸಂಭವಿಸಿದೆ.

ಈ ಸಂಬಂಧ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details