ಭಟ್ಕಳ:ಬೆಂಗಳೂರಿನಿಂದ ಹೊನ್ನಾವರದ ಕಡೆ ಪ್ರಯಾಣಿಕರನ್ನು ಕರೆತರುತ್ತಿದ್ದ ಸಾರಿಗೆ ಸಂಸ್ಥೆಯ ಐರಾವತ ಬಸ್ ಹೊನ್ನಾವರ ತಾಲೂಕಿನ ಮುಗ್ವಾ ಗ್ರಾಮದ ಬಾಳೆಗದ್ದೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಬ್ಯಾರಿಕೇಡ್ಗೆ ಬಡಿದಿದ್ದು, ಬಸ್ನಲ್ಲಿದ್ದ ಪ್ರಯಾಣಿಕರು ಸೇಫ್ ಆಗಿದ್ದಾರೆ.
ಹೊನ್ನಾವರ ಬಳಿ ಸಾರಿಗೆ ಬಸ್ ಅಪಘಾತ: ಅಪಾಯದಿಂದ ಪಾರಾದ ಪ್ರಯಾಣಿಕರು - Iravatha bus accident near honnavar
ಬೆಂಗಳೂರುನಿಂದ ಹೊನ್ನಾವರಕ್ಕೆ ತೆರಳುತ್ತಿದ್ದ ಐರಾವತ ಬಸ್ ಹೊನ್ನಾವರ ತಾಲೂಕಿನ ಬಾಳೆಗದ್ದೆ ತಿರುವಿನಲ್ಲಿ ರಸ್ತೆ ಪಕ್ಕದ ಬ್ಯಾರಿಕೇಡ್ಗೆ ಬಡಿದಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯ ಆಗಿಲ್ಲ.
![ಹೊನ್ನಾವರ ಬಳಿ ಸಾರಿಗೆ ಬಸ್ ಅಪಘಾತ: ಅಪಾಯದಿಂದ ಪಾರಾದ ಪ್ರಯಾಣಿಕರು](https://etvbharatimages.akamaized.net/etvbharat/prod-images/768-512-4743954-thumbnail-3x2-vicky.jpg)
ಬಾಳೆಗದ್ದೆ ತಿರುವಿನಲ್ಲಿ ಅಪಘಾತ
ಬೆಳಗಿನ ಜಾವ ಈ ಘಟನೆ ಸಂಭವಿಸಿದ್ದು, ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣಕ್ಕೆ ಸಿಗದ ಕಾರಣದಿಂದಾಗಿ ಈ ದುರ್ಘಟನೆ ಸಂಭವಿಸಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಯಾವುದೇ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ.
ಸಾರಿಗೆ ಇಲಾಖೆ ಬದಲಿ ವ್ಯವಸ್ಥೆ ಮೂಲಕ ಪ್ರಯಾಣಿಕರನ್ನು ಹೊನ್ನಾವರಕ್ಕೆ ಕರೆ ತರಲಾಗಿದ್ದು, ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Last Updated : Oct 14, 2019, 9:41 AM IST