ಕಾರವಾರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸುಂಕ ವಸೂಲಾತಿಗೆ ತೆರೆಯಲಾದ ಟೋಲ್ ಗೇಟ್ನಲ್ಲಿ ನೂರಕ್ಕೆ ನೂರಷ್ಟು ಸ್ಥಳೀಯರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅಂಕೋಲಾ ತಾಲೂಕಿನ ಬೆಲೆಕೇರಿ ಟೋಲ್ ಗೇಟ್ ಬಳಿ ಪ್ರತಿಭಟನೆ ನಡೆಸಿದರು.
ಕಾರವಾರ: ಟೋಲ್ ಗೇಟ್ನಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಆಗ್ರಹ - ಟೋಲ್ ಗೇಟ್ನಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಆಗ್ರಹ
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸುಂಕ ವಸೂಲಾತಿಗೆ ತೆರೆಯಲಾದ ಟೋಲ್ ಗೇಟ್ನಲ್ಲಿ ನೂರಕ್ಕೆ ನೂರಷ್ಟು ಸ್ಥಳೀಯರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅಂಕೋಲಾ ತಾಲ್ಲೂಕಿನ ಬೆಲೆಕೇರಿ ಟೋಲ್ ಗೇಟ್ ಬಳಿ ಪ್ರತಿಭಟನೆ ನಡೆಸಿದರು.
![ಕಾರವಾರ: ಟೋಲ್ ಗೇಟ್ನಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಆಗ್ರಹ karvara protest](https://etvbharatimages.akamaized.net/etvbharat/prod-images/768-512-5391299-thumbnail-3x2-net.jpg)
ಕರವೇ ಜಿಲ್ಲಾಧ್ಯಕ್ಷ ಭಾಸ್ಕರ್ ಪಟಗಾರ ನೇತೃತ್ವದಲ್ಲಿ ಬೇಲೆಕೇರಿ ಕ್ರಾಸ್ನಲ್ಲಿ ಸೇರಿದ ಕಾರ್ಯಕರ್ತರು ಐಆರ್ಬಿ ಕಂಪನಿಯಿಂದ ಈಗಾಗಲೇ ಟೋಲ್ ಗೇಟ್ ನಿರ್ಮಾಣವಾಗಿದೆ. ಸದ್ಯದಲ್ಲಿಯೇ ಟೋಲ್ ಕಾರ್ಯರಂಭವಾಗಲಿದ್ದು, ಇಲ್ಲಿ ಕರ್ತವ್ಯ ನಿರ್ವಹಿಸಲು ಸಾಕಷ್ಟು ಉದ್ಯೋಗಿಗಳ ಅವಶ್ಯಕತೆ ಇದೆ. ಆದ್ದರಿಂದ ಸರ್ಕಾರದ ನೌಕಾನೆಲೆ, ಕೊಂಕಣ ರೈಲ್ವೆ ಹಾಗೂ ರಾಷ್ಟ್ರೀಯ ಹೆದ್ದಾರಿ- 66 ಹೀಗೆ ಹಲವು ಯೋಜನೆಗಳಿಂದ ನಿರ್ಗತಿಕರಾದ ಸ್ಥಳಿಯರಿಗೆ ಮೊದಲು ಆದ್ಯತೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಸ್ಥಳೀಯವಾಗಿ ಸಾಕಷ್ಟು ನಿರುದ್ಯೋಗಿಗಳಿದ್ದು, ಯೋಜನೆಗಾಗಿ ಮನೆ ಜಮೀನುಗಳನ್ನು ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಅಂತಹವರಿಗೆ ಇಲ್ಲಿನ ಎಲ್ಲ ಉದ್ಯೋಗಗಳನ್ನು ನೀಡಬೇಕು ಎಂದು ಐಆರ್ಬಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು . ಒಂದೊಮ್ಮೆ ಉತ್ತರ ಕನ್ನಡ ಜಿಲ್ಲೆಯವರನ್ನು ಹೊರತುಪಡಿಸಿ ಅನ್ಯರಿಗೆ ನೀಡಿದರೇ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.